ಸುಜಾತಾ ಭಟ್ 
ರಾಜ್ಯ

SIT ಎಂಟ್ರಿ ಬೆನ್ನಲ್ಲೇ ಉಲ್ಟಾ ಹೊಡೆದ ಸುಜಾತಾ ಭಟ್: ಪ್ರಕರಣ ಬೇಡ, ಏನು ಬೇಡ ಎಂದು ಆಡಿಯೋ ಹರಿಬಿಟ್ಟ ವೃದ್ಧೆ!

ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು ಇದರ ಮಧ್ಯೆ MBBS ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ ಕೂಡ ದೊಡ್ಡ ಸದ್ದು ಮಾಡಿತ್ತು.

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು ಇದರ ಮಧ್ಯೆ MBBS ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ ಕೂಡ ದೊಡ್ಡ ಸದ್ದು ಮಾಡಿತ್ತು. ಇನ್ನು ಪ್ರಕರಣವನ್ನು ಎಸ್ಐಟಿಗೆ ವಹಿಸುತ್ತಿದ್ದಂತೆ ದೂರು ನೀಡಿದ್ದ ಸುಜಾತಾ ಭಟ್ ಇದೀಗ ವರಸೆ ಬದಲಾಯಿಸಿದ್ದಾರೆ. ಅನನ್ಯಾ ಭಟ್ ಕುರಿತಂತೆ ದಾಖಲೆಗಳನ್ನು ತೋರಿಸುವಂತೆ ಒತ್ತಡ ತೀವ್ರವಾಗಿದ್ದರಿಂದ ದಿಢೀರ್ ಅಂತ ಮಹಿಳೆಯೊಬ್ಬರ ಫೋಟೋವನ್ನು ಸುಜಾತಾ ಭಟ್ ತೋರಿಸಿದ್ದರು.

ಈ ಫೋಟೋದಲ್ಲಿರುವುದು ಅನನ್ಯಾ ಭಟ್ ಅಲ್ಲ. ಬದಲಿಗೆ ವಾಸಂತಿ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಸುಜಾತಾ ಭಟ್ ಆರೋಪದ ಬಗ್ಗೆ ಅನುಮಾನಗಳು ಮೂಡಿದ್ದವು. ಇನ್ನು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅನನ್ಯಾ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ರವಾನಿಸಲಾಗಿತ್ತು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಪ್ರಕರಣದ ವಿವರ ನೀಡುವಂತೆ ಸುಜಾತಾ ಭಟ್​ಗೆ ನೋಟಿಸ್ ನೀಡಿದೆ. ಆದರೆ ಎಸ್ಐಟಿ ನೋಟಿಸ್​ಗೆ ಉತ್ತರಿಸದ ಸುಜಾತಾ ಭಟ್, ಆಡಿಯೋವೊಂದನ್ನು ಹರಿಬಿಟ್ಟು ಕೇಸ್ ವಾಪಾಸ್ ಪಡೆಯುವುದಾಗಿ ಹೇಳಿದ್ದಾರೆ.

2003ರಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಅನನ್ಯಾ ಭಟ್‌ ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ಸುಜಾತಾ ಭಟ್ ಇದೇ ಜುಲೈ 15ಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿದ ದೂರು ದಾಖಲಿಸಿದ್ದರು. ನನ್ನ ಮಗಳು ಬದುಕಿದ್ದಾಳೆ ಇಲ್ಲವೋ ಗೊತ್ತಿಲ್ಲ. ಸತ್ತಿದ್ದರೆ ಆಕೆಯ ಕಳೇಬರವನ್ನಾದರೂ ಹುಡುಕಿಕೊಡಿ ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ ಮಾಡುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT