ಸೋನಿಯಾ ಗಾಂಧಿ - ಸಿದ್ದರಾಮಯ್ಯ 
ರಾಜ್ಯ

ಸೋನಿಯಾ ಗಾಂಧಿಯಿಂದ ಮೈಸೂರು ದಸರಾ ಉದ್ಘಾಟನೆ ಒಂದು ಸುಳ್ಳು ಸುದ್ದಿ: CMO ಸ್ಪಷ್ಟನೆ

ಸೋನಿಯಾ ಗಾಂಧಿಯವರು ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು.

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಸೋನಿಯಾ ಗಾಂಧಿಯವರು ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟನೆ ನೀಡಿದೆ. ಈ ಮೂಲಕ ಅಂತೆ ಕಂತೆಗಳಿಗೆ ತೆರೆ ಎಳೆಯಲಾಗಿದೆ.

ಮೈಸೂರು ದಸರಾವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಂದ ಉದ್ಘಾಟಿಸಲು ಸಿಎಂ ಸಿದ್ದರಾಮಯ್ಯ ಬಯಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಆದರೆ, ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಖುದ್ದು ಸಿಎಂ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡುವ ಸಾಧ್ಯತೆಗಳಿವೆ ಎಂದು ವರದಿ ಮಾಡಲಾಗಿತ್ತು.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಶುರುವಾಗಿದ್ದು, ರಾಜ್ಯ ಸರ್ಕಾರದ ನಡೆಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಸಿಎಂ ಕಚೇರಿ ಸ್ಪಷ್ಟನೆ ನೀಡಿದ್ದು, ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚಿತ್ತಾಪುರದಲ್ಲಿ ನ.2ಕ್ಕೆ RSS ಪಥಸಂಚಲನಕ್ಕೆ ಅನುಮತಿ: ಅ.24ಕ್ಕೆ ಅರ್ಜಿ ವಿಚಾರಣೆ, ಹೈಕೋರ್ಟ್ ಮಹತ್ವದ ಸೂಚನೆ

ನ.2ಕ್ಕೆ ಚಿತ್ತಾಪುರ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟವರಿಗೆ ಮುಖಭಂಗವಾಗಿದೆ; BJP

Afghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯ

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾ.ಪಂ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಸ್ವತ್ತು ಸೌಲಭ್ಯ..!

ಗುತ್ತಿಗೆದಾರರು ಬಾಕಿ ಬಿಲ್ ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ DCM ಡಿಕೆ.ಶಿವಕುಮಾರ್ ಅವರೇ?

SCROLL FOR NEXT