ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಬಂಧನವಾಗಿರುವುದು ನಿಜ, ಸತ್ಯ ಹೊರತರುವುದಕ್ಕಾಗಿಯೇ SIT ರಚಿಸಿದ್ದೇವೆ; ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ.

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುಧಾರಿ ವ್ಯಕ್ತಿಯ ಬಂಧನವಾಗಿರುವುದು ನಿಜ. ಸತ್ಯವನ್ನು ಹೊರತರುವುದಕ್ಕಾಗಿಯೇ ನಮ್ಮ ಸರ್ಕಾರ ಎಸ್‌ಐಟಿ ರಚಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ. ಬಂಧನ ಆಗಿರುವುದಂತೂ ಖಚಿತ ಎಂದು ಹೇಳಿದರು.

ಸಾಕ್ಷಿ ದೂರುದಾರನ ದೂರು ಆಧರಿಸಿಯೇ ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಸದ್ಯ ಎಸ್‌ಐಟಿ ತನಿಖೆ ಮುಂದುವರಿದಿದೆ. ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೆ ಯಾವ ಮಾಹಿತಿಯನ್ನೂ ಹಂಚಿಕೊಳ್ಳಲು ಸಾಧ್ಯವಿಲ್ಲ. ಜೊತೆಗೆ ಅದರ ಬಗ್ಗೆ ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇದರ ಹಿಂದೆ ದೊಡ್ಡ ಜಾಲ ಇದೆ ಎಂಬ ಬಗ್ಗೆಯೂ ಆರೋಪ ಕೇಳಿಬಂದಿದೆ. ಇದೂ ಕೂಡ ಪತ್ತೆಯಾಗಬೇಕಲ್ಲವೇ? ಜಾಲವಿದೆಯೇ? ಇಲ್ಲವೇ ಎಂಬ ಬಗ್ಗೆಯೂ ವರದಿ ಬಂದ ಬಳಿಕವಷ್ಟೇ ನನಗೆ ಉತ್ತರಿಸಲು ಸಾಧ್ಯ. ಅಲ್ಲಿಯವರೆಗೂ ಊಹಾಪೋಹಾಗಳು ಮಾತ್ರ ಇರುತ್ತದೆ ಎಂದರು.

ದೂರುದಾರನ ಬಂಧನದಿಂದ ಎಸ್‌ಐಟಿ ತನಿಖೆ ನಿಲ್ಲುತ್ತದೆ ಎಂಬುದರ ಬಗ್ಗೆ ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಸುಜಾತ ಭಟ್‌ ಅವರ ಪ್ರಕರಣದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಹಾಗಾಗಿ, ಯಾವುದೇ ವಿಚಾರವನ್ನು ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಎಲ್ಲ ಮಾಹಿತಿಯನ್ನು ಹಂಚಿಕೊಂಡಲ್ಲಿ ತನಿಖೆಗೆ ತೊಡಕಾಗುತ್ತದೆ. ಬಿಜೆಪಿಯವರು ಆರೋಪ ಮಾಡುತ್ತಲೇ ಇರುತ್ತಾರೆ. ಬೇರೆ ಬೇರೆಯವರ ಹೇಳಿಕೆಗಳನ್ನೂ ಗಮನಿಸಿದ್ದೇನೆ. ಎಲ್ಲ ಹೇಳಿಕೆಗಳ ಆಧಾರದ ಮೇಲೆ ನಾವು ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಾಕ್ಷಿ ದೂರುದಾರನನ್ನು ಸಂಶಯದಿಂದ ಬಂಧಿಸಲಾಗಿದೆಯೇ ಅಥವಾ ಯಾವ ಸೆಕ್ಷನ್‌ಗಳ ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬುದು ಎಲ್ಲವೂ ಎಸ್‌ಐಟಿ ತನಿಖೆಗೆ ಬಿಟ್ಟದ್ದು. ಬಂಧಿಸಿರುವುದಂತೂ ಖಚಿತ. ಸತ್ಯವನ್ನು ಹೊರತರುವುದಷ್ಟೇ ಎಸ್‌ಐಟಿ ಕೆಲಸ. ದೂರುದಾರನ ಮಂಪರು ಪರೀಕ್ಷೆ ಮಾಡಬೇಕೋ ಬೇಡವೋ ಎಂಬುದು ಎಸ್‌ಐಟಿ ಮುಖ್ಯಸ್ಥರಿಗೆ ಬಿಟ್ಟದ್ದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT