ಶ್ರೀಕ್ಷೇತ್ರ ಧರ್ಮಸ್ಥಳ 
ರಾಜ್ಯ

Dharmasthala ಬುರುಡೆ ಪ್ರಕರಣದ ದೂರುದಾರನ ಬಂಧನ: ಶಿವತಾಂಡವ ಫೋಟೋ ಪೋಸ್ಟ್ ಮಾಡಿದ ಧರ್ಮಸ್ಥಳ ಶ್ರೀಕ್ಷೇತ್ರ!

ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ದೂರದಾರನನ್ನೇ ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಆತನ ಅಸಲಿ ಮುಖ ಬಹಿರಂಗಗೊಂಡಿದೆ.

ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ದೂರದಾರನನ್ನೇ ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಆತನ ಅಸಲಿ ಮುಖ ಬಹಿರಂಗಗೊಂಡಿದೆ. ಮಾಸ್ಕ್ ಮ್ಯಾನ್ ಎಂದೇ ಗುರುತಿಸಲಾಗುತ್ತಿದ್ದ ದೂರದಾರ ಅಸಲಿ ಮುಖ ಬಹಿರಂಗಗೊಂಡಿದ್ದು ಆತ ಯಾರೆಂಬುದು ಪತ್ತೆಯಾಗಿದೆ. ಹೌದು... ಇಷ್ಟು ದಿನ ಮಾಸ್ಕ್ ಹಾಕಿಕೊಂಡು ಹತ್ತಾರು ಕಡೆ ಶವಗಳನ್ನು ಹೂತ್ತಿದ್ದಾಗಿ ಹೇಳುತ್ತಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಎಂಬುದು ಪತ್ತೆಯಾಗಿದೆ.

ದೂರುದಾನ ಚಿನ್ನಯ್ಯ ಬಂಧನ ಬೆನ್ನಲ್ಲೇ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು, ಧರ್ಮಸ್ಥಳದ ವಿರುದ್ಧ ಪಿತೂರಿ ನಡೆದಿವೆ ಎಂಬ ಒಂದೊಂದೆ ಸಂಗತಿಗಳು ಹೊರಬರುತ್ತಿವೆ. ಇದು ಹಿಂದೂ ನಂಬಿಕೆಗಳ ಮೇಲೆ ಮಾಡಿದ ನೇರ ದಾಳಿ ಎಂದು ಹೇಳಿದ್ದಾರೆ.

ಇನ್ನು ಶ್ರೀಧರ್ಮಸ್ಥಳ ಮಂಜುನಾಥ ದೇವಸ್ಥಾನದ ಟ್ರಸ್ಟ್ ಇದೀಗ ಶಿವತಾಂಡವದ ಫೋಟೋ ಪೋಸ್ಟ್ ಮಾಡಿದೆ. ನಮೋ ಮಂಜುನಾಥ ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT