ಸುಜಾತಾ ಭಟ್ ಮತ್ತು ವಾಸಂತಿ ಸಹೋದರ ವಿಜಯ್ 
ರಾಜ್ಯ

Dharmasthala: ವಾಸಂತಿ ಸಾವು ಪ್ರಕರಣದಲ್ಲಿ ಸುಜಾತ ಭಟ್ ಕೈವಾಡ? ಸಹೋದರ ವಿಜಯ್ ಸ್ಫೋಟಕ ಆರೋಪ!

'ಮಗಳು ಅನನ್ಯ ಭಟ್ ನಾಪತ್ತೆ ಆಗಿದ್ದಾಳೆ ಎಂದು ಹೇಳುತ್ತಿದ್ದ ಸುಜಾತ ಭಟ್ ದಿನವೊಂದು ಹೇಳಿಕೆ ನೀಡಿ ಇಡೀ ರಾಜ್ಯಕ್ಕೆ ಮಂಕುಬೂದಿ ಎರಚುತ್ತಿದ್ದಾಳೆ. ನನ್ನ ತಂಗಿ ವಾಸಂತಿ ಸಾವಿನಲ್ಲಿ ಸುಜಾತ ಭಟ್ ಕೈವಾಡ ಇದೆ...'

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ತಿರುವು ದೊರೆಯುತ್ತಿದ್ದು, ಅನನ್ಯ ಭಟ್ ನನ್ನ ಮಗಳು ಎಂದು ಹೇಳಿಕೊಂಡಿದ್ದ ಸುಜಾತ್ ಭಟ್ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೌದು.. ಮಗಳು ಅನನ್ಯ ಭಟ್ ನಾಪತ್ತೆ ಆಗಿದ್ದಾಳೆ ಎಂದು ಹೇಳುತ್ತಿದ್ದ ಸುಜಾತ ಭಟ್ ದಿನವೊಂದು ಹೇಳಿಕೆ ನೀಡುತ್ತಿದ್ದು, ಇದೀಗ ಸರಣಿ ಸಾವು ಪ್ರಕರಣದಲ್ಲಿ ಸುಜಾತಾ ಭಟ್ ಕೈವಾಡವಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ವತಃ ವಾಸಂತಿ (ಅನನ್ಯ ಭಟ್ ಎಂದು ಹೇಳಲಾಗುತ್ತಿರುವ ಮಹಿಳೆ) ಸಹೋದರ ವಿಜಯ್ ಗಂಭೀರ ಆರೋಪ ಮಾಡಿದ್ದು, 'ಮಗಳು ಅನನ್ಯ ಭಟ್ ನಾಪತ್ತೆ ಆಗಿದ್ದಾಳೆ ಎಂದು ಹೇಳುತ್ತಿದ್ದ ಸುಜಾತ ಭಟ್ ದಿನವೊಂದು ಹೇಳಿಕೆ ನೀಡಿ ಇಡೀ ರಾಜ್ಯಕ್ಕೆ ಮಂಕುಬೂದಿ ಎರಚುತ್ತಿದ್ದಾಳೆ. ನನ್ನ ತಂಗಿ ವಾಸಂತಿ ಸಾವಿನಲ್ಲಿ ಸುಜಾತ ಭಟ್ ಕೈವಾಡ ಇದೆ' ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ವಿಜಯ್, 'ಸುಜಾತ ಭಟ್ ರಾತ್ರಿ ಆದರೆ ಅನನ್ಯ ಭಟ್ ನನ್ನ ಮಗಳು ಅಲ್ಲ ಅಂತಾಳೆ. ಬೆಳಗ್ಗೆ ಆದರೆ ಅನನ್ಯ ನನ್ನ ಮಗಳು ಅಂತಾಳೆ. ಇಲ್ಲಿ ತುಂಬಾ ಸಂಶಯ ಇದೆ. ಒಂದೊಂದು ದಿನ ಒಂದೊಂದು ಹೇಳಿಕೆ ಕೊಡುತ್ತಿದ್ದಾಳೆ. ಇವಳು ನಾಟಕ ಆಡುತ್ತಿದ್ದಾಳೆ. ಆದರೆ ಸುಜಾತ ಭಟ್ ಹೋದ ಕಡೆಗೆಲ್ಲ ಸಾವೇ ಆಗಿವೆ ಎಂದು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಸುಜಾತಾ ಕೈವಾಡ?

ಅಂತೆಯೇ, 'ಸೇಟು ಅಂತಾ ಇದ್ದರು ಅವ್ರು ಸತ್ತು ಹೋಗಿದ್ದಾರೆ. ರಂಗ ಪ್ರಸಾದ್, ರಂಗ ಪ್ರಸಾದ್ ಮಗ, ನನ್ನ ತಂಗಿ ವಾಸಂತಿ ಎಲ್ಲರೂ ಜೀವ ಬಿಟ್ಟಿದ್ದಾರೆ. ಇದರಿಂದ ಸುಜಾತ್ ಭಟ್ ಮೇಲೆ ನಮಗೆ ಸಂಶಯ ಇದೆ. ಸುಜಾತ ಬಗ್ಗೆ ಸೂಕ್ತ ತನಿಖೆ ಆಗಬೇಕು. ವೀರಾಜಪೇಟೆಯಿಂದ ಬೆಂಗಳೂರಿಗೆ ಆಗಾಗ ಓಡಾಡುತ್ತಿರುತ್ತಾರೆ. ನಮ್ಮ ವಾಸಂತಿಯ ಡೆತ್ ಸರ್ಟಿಫಿಕೆಟ್​ ತಗಳೋಕೆ ಬಂದಿದ್ದಳಂತೆ ಹೇಳಿದ್ದಾರೆ.

ಹೀಗಾಗಿ ಸುಜಾತ್ ಭಟ್ ಬಗ್ಗೆ ಸರ್ಕಾರ ಸೂಕ್ತ ತನಿಖೆ ಮಾಡಬೇಕು. ವಾಸಂತಿ ಸಾವಿನ ಹಿಂದೆಯೂ ಯಾರಿದ್ದಾರೆ ಎನ್ನುವುದನ್ನ ತನಿಖೆಯಿಂದ ಹೊರ ಬರಬೇಕು. ವಾಸಂತಿ ಸಾವಿನಲ್ಲಿ ಸುಜಾತ ಭಟ್ ಕೈವಾಡ ಇದೆ ಅಂತ ತನಿಖೆ ಮಾಡಬೇಕು ಎಂದು ವಿಜಯ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

SCROLL FOR NEXT