ಧರ್ಮಸ್ಥಳ ಪ್ರಕರಣದ ಸಾಕ್ಷಿ-ದೂರುದಾರ 
ರಾಜ್ಯ

ಧರ್ಮಸ್ಥಳದಲ್ಲಿ ಶವಗಳ ಹೂತ ಪ್ರಕರಣ: SIT ಅಧಿಕಾರಿಗಳಿಂದ ಮಾಸ್ಕ್‏ಮ್ಯಾನ್ ಬಂಧನ

ದೂರುದಾರ-ಸಾಕ್ಷಿಯನ್ನು ದೀರ್ಘ ಗಂಟೆಗಳ ವಿಚಾರಣೆಯ ನಂತರ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಮಂಗಳೂರು: ಕಳೆದ ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಲ್ಲಿ ಹಲವಾರು ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳು ನಡೆದಿವೆ ಎಂದು ಆರೋಪಿಸಿದ್ದ ದೂರುದಾರರನ್ನು ಈ ಆರೋಪಗಳ ತನಿಖೆಗಾಗಿ ರಚಿಸಲಾದ ಎಸ್‌ಐಟಿ ಶನಿವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅನಾಮಿಕ ದೂರುದಾರ ನೀಡಿದ ಹೇಳಿಕೆಗಳು ಮತ್ತು ಒದಗಿಸಿದ ದಾಖಲೆಗಳಲ್ಲಿ ವ್ಯತ್ಯಾಸಗಳು ಕಂಡುಬಂದ ನಂತರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಎಸ್‌ಐಟಿ ತನಿಖೆ ಮುಂದುವರಿಸಿದೆ.

ದೂರುದಾರ-ಸಾಕ್ಷಿಯನ್ನು ದೀರ್ಘ ಗಂಟೆಗಳ ವಿಚಾರಣೆಯ ನಂತರ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಸುಜಾತಾ ಭಟ್ ಸುದ್ದಿವಾಹಿನಿಯೊಂದಕ್ಕೆ ತನ್ನ ಮಗಳು ಅನನ್ಯ ಭಟ್ 2003 ರಲ್ಲಿ ಕೆಲವು ವ್ಯಕ್ತಿಗಳ ಒತ್ತಡದಿಂದ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾಳೆ ಎಂದು ಸುಳ್ಳು ದೂರು ದಾಖಲಿಸಿರುವುದಾಗಿ ಆರೋಪಿಸಿದ ಮರುದಿನವೇ ಈ ಬಂಧನ ನಡೆದಿದೆ. ತನಗೆ ಆ ಹೆಸರಿನ ಹೆಣ್ಣು ಮಗಳು ಇಲ್ಲ ಎಂದು ಅವರು ಹೇಳಿದ್ದರು ಮತ್ತು ಆಸ್ತಿ ಪ್ರಕರಣದಲ್ಲಿ ನೊಂದಿದ್ದರಿಂದ ಸುಳ್ಳು ಆರೋಪಗಳನ್ನು ಹೊರಿಸಿದ್ದರು ಎಂದು ವರದಿಯಾಗಿದೆ.

ಧರ್ಮಸ್ಥಳ ದೇವಾಲಯ ಅಧಿಕಾರಿಗಳ ಒತ್ತಡದಿಂದ ಮೃತರ ಶವಗಳನ್ನು ಸಮಾಧಿ ಮಾಡಿರುವುದಾಗಿ ಹೇಳಿಕೊಂಡಿದ್ದ ದೂರುದಾರನನ್ನು ಕರೆದುಕೊಂಡು ಹೋಗಿ ತನಿಖೆ ಮಾಡಿದಾಗ ಹೆಚ್ಚಿನ ಸ್ಥಳಗಳಲ್ಲಿ ಮಾನವ ಅವಶೇಷಗಳು ಪತ್ತೆಯಾಗದ ಕಾರಣ, ಬಂಧಿಸುವಂತೆ ಸರ್ಕಾರ ಮತ್ತು ಎಸ್‌ಐಟಿ ಮೇಲೆ ಒತ್ತಡ ಹೆಚ್ಚಾಗಿತ್ತು.

ಇಲ್ಲಿಯವರೆಗೆ ಅಗೆದ 17 ಸ್ಥಳಗಳಲ್ಲಿ, ಕೇವಲ ಎರಡು ಸ್ಥಳಗಳಲ್ಲಿ ಮಾತ್ರ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಮಧ್ಯೆ, ಧರ್ಮಸ್ಥಳದಲ್ಲಿ ಪೌರಕಾರ್ಮಿಕರಾಗಿದ್ದಾಗ ದೂರುದಾರರು ತಮ್ಮ ಸಹೋದ್ಯೋಗಿಗಳೆಂದು ಹೇಳಿಕೊಂಡ ಕೆಲವು ವ್ಯಕ್ತಿಗಳು ಅವರಿಗೆ ವಿರುದ್ಧವಾದ ಹೇಳಿಕೆಗಳನ್ನು ನೀಡಿದ್ದಾರೆ. ತನಿಖೆಯ ಭಾಗವಾಗಿ ಎಸ್‌ಐಟಿ ಅವರನ್ನು ಸಹ ಪ್ರಶ್ನಿಸಿತ್ತು.

ದೂರುದಾರರ ವಿರುದ್ಧ ರಾಜ್ಯಾದ್ಯಂತ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಧರ್ಮಸ್ಥಳ ದೇವಾಲಯ ಅಧಿಕಾರಿಗಳ ವಿರುದ್ಧದ ಆರೋಪಗಳು ಧರ್ಮಸ್ಥಳ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಮೇಲೆ ಅಪಪ್ರಚಾರ ಮಾಡುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಹಲವರು ಭಾವಿಸಿದ್ದರು. ಹೆಗ್ಗಡೆಯವರು ಕೂಡ ಇದು ಹಿಂದೂ ಧಾರ್ಮಿಕ ಸಂಸ್ಥೆಗಳ ಮೇಲಿನ ದಾಳಿ ಎಂದು ಹೇಳುವ ಮೂಲಕ ಆರೋಪಗಳನ್ನು ತಳ್ಳಿಹಾಕಿದ್ದರು.

ಬಿಜೆಪಿ ನಾಯಕರು ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸುವುದರೊಂದಿಗೆ ನಡೆಯುತ್ತಿರುವ ಮಳೆಗಾಲ ಅಧಿವೇಶನದಲ್ಲಿ ತೀವ್ರ ಸದ್ದು ಮಾಡಿತ್ತು. ಹೆಗ್ಗಡೆ ಅವರನ್ನು ಭೇಟಿ ಮಾಡಿ ಧರ್ಮಸ್ಥಳದ ಪರವಾಗಿ ಇರುವುದಾಗಿ ಹೇಳಿದ್ದರು. ದೂರುದಾರರ ಆರೋಪಗಳು ಸುಳ್ಳು ಎಂದು ಸಾಬೀತಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT