ರಾಜ್ಯ

ನನಗೆ ಹಣದ ಆಮಿಷವೊಡ್ಡಿ ಕರೆಸಿಕೊಂಡರು; ನಾನಿಲ್ಲಿ ಪಾತ್ರಧಾರನಷ್ಟೆ, ಸೂತ್ರಧಾರರು ಬೇರೆಯವರು: ಮಾಸ್ಕ್‏ಮ್ಯಾನ್ ಚಿನ್ನಯ್ಯ ಪ್ರತಿಕ್ರಿಯೆ

ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ತಮಿಳುನಾಡಿನಲ್ಲಿದ್ದ ಚಿನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದಿತ್ತು ಎನ್ನಲಾಗುತ್ತಿದೆ.

ಬೆಂಗಳೂರು: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿಕೊಂಡಿದ್ದ ಅನಾಮಿಕನ ಮುಖ ಈಗ ಅನಾವರಣಗೊಂಡಿದೆ. ಎಸ್​ಐಟಿ ಅಧಿಕಾರಿಗಳು ಮಾಸ್ಕ್​​​ಮ್ಯಾನ್​​ನನ್ನು ಬಂಧಿಸಿ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ತಮಿಳುನಾಡಿನಲ್ಲಿದ್ದ ಚಿನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದಿತ್ತು ಎನ್ನಲಾಗುತ್ತಿದೆ. ಸದ್ಯ ಆತ ಎಸ್​​ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಚಿನ್ನಯ್ಯ ಹೇಳಿದ್ದೇನು?

ಡಿಸೆಂಬರ್ ಕೊನೆಯ ವಾರದಲ್ಲಿ ತಮಿಳುನಾಡಿನಲ್ಲಿದ್ದ ನನ್ನನ್ನು ಧರ್ಮಸ್ಥಳ ದೇವಸ್ಥಾನದ ವಿರೋಧಿ ಗ್ಯಾಂಗ್‌ ಸಂಪರ್ಕಿಸಿತ್ತು. ಮಾತುಕತೆ ನಡೆಸುವ ವೇಳೆ ಹಣದ ಆಮಿಷ ಒಡ್ಡಿದ್ದರು. ಈ ಪ್ರಕರಣದ ಮುಖ್ಯ ನಾಯಕ ನೀನು. ನಿನ್ನಿಂದಲೇ ಈ ಪ್ರಕರಣಕ್ಕೆ ರೋಚಕ ತಿರುವು ಸಿಗುತ್ತದೆ ಎಂದು ಹೇಳಿದ್ದರು.

ಯಾವುದೇ ಕಾರಣಕ್ಕೂ ನೀನು ಭಯ ಪಡುವ ಅಗತ್ಯವಿಲ್ಲ. ತನಿಖೆಯಾದ ನಂತರ ಹಲವು ಜನ ದೂರುದಾರರು ಬರುತ್ತಾರೆ. ಎಲ್ಲ ತನಿಖೆ ನಡೆಯುತ್ತದೆ ಎಂದು ಭರವಸೆ ನೀಡಿದ್ದರು.

ಆರಂಭದಲ್ಲಿ ಬೆಂಗಳೂರಿನಲ್ಲಿ ನನಗೆ ಸ್ವಲ್ಪ ತರಬೇತಿ ನೀಡಲಾಗಿತ್ತು. ಪೊಲೀಸರು ಕೇಳಿದಾಗ ಯಾವ ರೀತಿ ಉತ್ತರ ಹೇಳಬೇಕು ಎನ್ನುವುದನ್ನು ತಿಳಿಸಲಾಗಿತ್ತು. ನಂತರ ಸೂತ್ರಧಾರರು ಹೇಳಿದಂತೆ ನಾನು ಪಾತ್ರ ಮಾಡುತ್ತಿದ್ದೆ. ಅವರು ಹೇಳಿದಂತೆ ನಾನು ಮಾಹಿತಿ ನೀಡುತ್ತಿದ್ದೆ, ನಾನಿಲ್ಲಿ ಪಾತ್ರಧಾರನಷ್ಟೆ, ಸೂತ್ರಧಾರರು ಬೇರೆಯವರಿದ್ದರು ಎಂದಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT