ಮಹೇಶ್ ತಿಮರೋಡಿ 
ರಾಜ್ಯ

ಬಿ.ಎಲ್ ಸಂತೋಷ್ ವಿರುದ್ಧ ಹೇಳಿಕೆ: ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು; ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ?

ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಲಾಗಿದೆ.

ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇದಕ್ಕೂ ಮುನ್ನ ಉಡುಪಿ ನ್ಯಾಯಾಲಯದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಾದ ಮಂಡಿಸಿದ ವಕೀಲರು, ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ. ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ ಎಂದು ಹೇಳಿದರು.

ಈ ವೇಳೆ ಪ್ರತಿವಾದಿಗಳಿಂದ ಆಕ್ಷೇಪ ಮಾಡಲಾಯಿತು. ಆದರೆ, ವಾದ ವಿವಾದ ಆಲಿಸಿದ ನ್ಯಾಯಾಧೀಶ ನಾಗೇಶ್, ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಲಾಗಿದೆ

ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಆ.21ರಂದು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಇದಾದ ನಂತರ ಮಹೇಶ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಇಂದು ಪುನಃ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ 2 ಗಂಟೆಗಳ ಕಾಲ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರ ವಿಚಾರಣೆಗೆ ಒಪ್ಪಿಸಿ ಕಾಲಾವಕಾಶ ನೀಡಿತ್ತು. ಪೊಲೀಸರು ವಿಚಾರಣೆ ನಡೆಸಿದ ನಂತರ ಪುನಃ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಎರಡೂ ಕಡೆ ವಕೀಲರ ವಾದ ಆಲಿಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮತ್ತೊಂದೆಡೆ ಧರ್ಮಸ್ಥಳ ಪ್ರಕರಣದಲ್ಲಿ ಮಹೇಶ್ ತಿಮರೋಡಿ ಮನೆಯಲ್ಲಿ ನಾಲ್ಕು ದಿನಗಳ ಕಾಲ ನಾನು ಇದ್ದಿದ್ದು ನಿಜ ಎಂದು ಸುಜಾತ್ ಭಟ್ ಹೇಳಿಕೆ ನೀಡಿದ್ದು, ಇದರಲ್ಲಿ ಮತ್ತೆ ಬಂಧನಕ್ಕೊಳಗಾಗುವ ಸಾಧ್ಯತೆಯೂ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT