Banu Mushtaq
ರಾಜ್ಯ

ಇಸ್ಲಾಂನಲ್ಲಿ ಅಲ್ಲಾ ಬಿಟ್ಟರೆ ಬೇರೆ ದೇವರಿಲ್ಲ; ಚಾಮುಂಡಿಯನ್ನು ದೇವತೆ ಅಂತ ಬಾನು ಮುಷ್ತಾಕ್ ಒಪ್ಪುತ್ತಾರಾ?: ಪ್ರತಾಪ್ ಸಿಂಹ ಪ್ರಶ್ನೆ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushtaq) ಅವರು ಆಯ್ಕೆಯಾಗಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಭಾನು ಮುಷ್ತಾಕ್ ಆಯ್ಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸಬೇಕು. ಭಾನು ಅವರು ಮುಸ್ಲಿಂ ಆಗಿರುವುದರಿಂದ ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದೆಡೆ ಪ್ರತಾಪ್ ಸಿಂಹ (Pratap simha) ಮಾತನಾಡಿ, ಇಸ್ಲಾಂ ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲಎನ್ನುತ್ತದೆ . ಹಾಗಾದರೆ ಬಾನು ಮುಷ್ತಾಕ್‌ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ ಅವರ ಮಾತನ್ನು ಒಪ್ಪುತ್ತಾ ಎಂದು ಪ್ರಶ್ನಿಸಿದರು. ಇನ್ನು ಬಾನು ಮುಷ್ತಾಕ್ ಬೂಕರ್ ಪ್ರಶಸ್ತಿ ಪಡೆದಿರುವುದಕ್ಕೆ ಅವರನ್ನು ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಮಾಡಿ, ಆದರೆ ಧಾರ್ಮಿಕ ನಂಬಿಕೆ ಮತ್ತು ಆಚರಣೆಯ ಪ್ರತೀಕವಾಗಿರುವ ದಸರಾ ಉದ್ಘಾಟನೆಗೆ ಕರೆಯುವುದು ಸೂಕ್ತವಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಸಿಟಿ ರವಿ ಸಹ ಮಾತನಾಡಿದ್ದು ಚಾಮುಂಡಿ ತಾಯಿ ಮೇಲೆ ನಂಬಿಕೆ, ಭಕ್ತಿ ಇದ್ದರೆ ಅವರು ಉದ್ಘಾಟಿಸುತ್ತಾರೆ ಈ ಬಗ್ಗೆ ನಾನೇನು ಕಮೆಂಟ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT