ಸಾಂಕೇತಿಕ ಚಿತ್ರ online desk
ರಾಜ್ಯ

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ: ಶಾಲೆಯ ಒತ್ತಡವೇ ಕಾರಣ ಎಂದ ಕುಟುಂಬಸ್ಥರು

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಬೆಂಗಳೂರು: ನೇಣು ಬಿಗಿದು 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಶಾಲೆಯಲ್ಲಿ ಅತೀವ್ರ ಕೆಲಸ ಕೊಡುತ್ತಿದ್ದು, ಇದರಿಂದಾಗಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆದರೆ,ಶಾಲೆಯ ಮುಖ್ಯೋಪಾಧ್ಯಾಯ ಅಶೋಕ್ ಅವರು ಆರೋಪವನ್ನು ನಿರಾಕರಿಸಿದ್ದಾರೆ. ನಾವು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ನಡೆಸುತ್ತಿದ್ದೇವೆ. ಹೋಂವರ್ಕ್ ಕುರಿತು ಶಿಕ್ಷಕರಿಂದ ಯಾವುದೇ ಬಲವಂತ ಅಥವಾ ಕಿರುಕುಳವಿಲ್ಲ. ಕುಸುಮಾ ಒಳ್ಳೆಯ ವಿದ್ಯಾರ್ಥಿನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಹೇಳಿದ್ದ ಕೆಲಸವನ್ನು ಮಾಡುತ್ತಿದ್ದಳು, ಶೈಕ್ಷಣಿಕವಾಗಿ ಉತ್ತಮವಾಗಿದ್ದಳು ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಮದನಾಯಕನಹಳ್ಳಿ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

SCROLL FOR NEXT