ಸಾಂಕೇತಿಕ ಚಿತ್ರ online desk
ರಾಜ್ಯ

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ: ಶಾಲೆಯ ಒತ್ತಡವೇ ಕಾರಣ ಎಂದ ಕುಟುಂಬಸ್ಥರು

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಬೆಂಗಳೂರು: ನೇಣು ಬಿಗಿದು 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಶಾಲೆಯಲ್ಲಿ ಅತೀವ್ರ ಕೆಲಸ ಕೊಡುತ್ತಿದ್ದು, ಇದರಿಂದಾಗಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆದರೆ,ಶಾಲೆಯ ಮುಖ್ಯೋಪಾಧ್ಯಾಯ ಅಶೋಕ್ ಅವರು ಆರೋಪವನ್ನು ನಿರಾಕರಿಸಿದ್ದಾರೆ. ನಾವು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ನಡೆಸುತ್ತಿದ್ದೇವೆ. ಹೋಂವರ್ಕ್ ಕುರಿತು ಶಿಕ್ಷಕರಿಂದ ಯಾವುದೇ ಬಲವಂತ ಅಥವಾ ಕಿರುಕುಳವಿಲ್ಲ. ಕುಸುಮಾ ಒಳ್ಳೆಯ ವಿದ್ಯಾರ್ಥಿನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಹೇಳಿದ್ದ ಕೆಲಸವನ್ನು ಮಾಡುತ್ತಿದ್ದಳು, ಶೈಕ್ಷಣಿಕವಾಗಿ ಉತ್ತಮವಾಗಿದ್ದಳು ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಮದನಾಯಕನಹಳ್ಳಿ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT