ಸಾಂಕೇತಿಕ ಚಿತ್ರ online desk
ರಾಜ್ಯ

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ: ಶಾಲೆಯ ಒತ್ತಡವೇ ಕಾರಣ ಎಂದ ಕುಟುಂಬಸ್ಥರು

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಬೆಂಗಳೂರು: ನೇಣು ಬಿಗಿದು 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಶಾಲೆಯಲ್ಲಿ ಅತೀವ್ರ ಕೆಲಸ ಕೊಡುತ್ತಿದ್ದು, ಇದರಿಂದಾಗಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆದರೆ,ಶಾಲೆಯ ಮುಖ್ಯೋಪಾಧ್ಯಾಯ ಅಶೋಕ್ ಅವರು ಆರೋಪವನ್ನು ನಿರಾಕರಿಸಿದ್ದಾರೆ. ನಾವು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ನಡೆಸುತ್ತಿದ್ದೇವೆ. ಹೋಂವರ್ಕ್ ಕುರಿತು ಶಿಕ್ಷಕರಿಂದ ಯಾವುದೇ ಬಲವಂತ ಅಥವಾ ಕಿರುಕುಳವಿಲ್ಲ. ಕುಸುಮಾ ಒಳ್ಳೆಯ ವಿದ್ಯಾರ್ಥಿನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಹೇಳಿದ್ದ ಕೆಲಸವನ್ನು ಮಾಡುತ್ತಿದ್ದಳು, ಶೈಕ್ಷಣಿಕವಾಗಿ ಉತ್ತಮವಾಗಿದ್ದಳು ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಮದನಾಯಕನಹಳ್ಳಿ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT