ಬಿಜೆಪಿ (ಸಂಗ್ರಹ ಚಿತ್ರ) online desk
ರಾಜ್ಯ

'ಧರ್ಮದ ಉಳಿವಿಗೆ ಧರ್ಮ ಯುದ್ಧ': ಧರ್ಮಸ್ಥಳಕ್ಕೆ ಬಿಜೆಪಿ ಪಾದಯಾತ್ರೆ

ಬೆಳಿಗ್ಗೆ 6 ಗಂಟೆಗೆ ಜಯನಗರ 4ನೇ ಬ್ಲಾಕ್‌ನಲ್ಲಿರುವ (ಮೈಯಾಸ್ ಹೋಟೆಲ್ ಬಳಿ) ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಬಳಿಕ ಪಾದಯಾತ್ರೆ ಪ್ರಾರಂಭವಾಗಲಿದೆ.

ಬೆಂಗಳೂರು: ದಕ್ಷಿಣ ಬೆಂಗಳೂರು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧ್ಯಕ್ಷ ಹಾಗೂ ಜಯನಗರ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ 'ಧರ್ಮದ ಉಳಿವಿಗೆ ಧರ್ಮ ಯುದ್ಧ' ಎಂಬ ಶೀರ್ಷಿಕೆಯಡಿ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಯಲಿದೆ.

ಬಿಜೆಪಿ ದಕ್ಷಿಣ ಜಿಲ್ಲಾ ಮಾಧ್ಯಮ ಉಸ್ತುವಾರಿ ಟಿಎಸ್ ಸುಬ್ರಹ್ಮಣ್ಯ ಬಿಡುಗಡೆ ಮಾಡಿರುವ ಹೇಳಿಕೆ ಪ್ರಕಾರ, ಬೆಳಿಗ್ಗೆ 6 ಗಂಟೆಗೆ ಜಯನಗರ 4ನೇ ಬ್ಲಾಕ್‌ನಲ್ಲಿರುವ (ಮೈಯಾಸ್ ಹೋಟೆಲ್ ಬಳಿ) ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಬಳಿಕ ಪಾದಯಾತ್ರೆ ಪ್ರಾರಂಭವಾಗಲಿದೆ.

ಬೆಳಿಗ್ಗೆ 7.30ಕ್ಕೆ, ಪಿಇಎಸ್ ವಿಶ್ವವಿದ್ಯಾಲಯ ರಿಂಗ್ ರಸ್ತೆ ಜಂಕ್ಷನ್ ಬಳಿಯ ನೈಸ್ ರಸ್ತೆಯ ಬಳಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ. ಜಯನಗರ, ಬಿಟಿಎಂ ಲೇಔಟ್, ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸುಮಾರು 400 ವಾಹನಗಳು ಧರ್ಮಸ್ಥಳಕ್ಕೆ ತೆರಳಲಿವೆ.

ಧರ್ಮಸ್ಥಳ ತಲುಪಿದ ನಂತರ, ಅವರು 1 ಕಿ.ಮೀ. ನಡೆದುಕೊಂಡು ಹೋಗಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸುತ್ತಾರೆ. ದೇವಸ್ಥಾನದ 'ಧರ್ಮಾಧಿಕಾರಿ' ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡುತ್ತಾರೆ ಮತ್ತು ಸಂಪೂರ್ಣ ಬೆಂಬಲ ಸೂಚಿಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಮೆರವಣಿಗೆಯಲ್ಲಿ ಪಕ್ಷದ ಇತರ ಹಿರಿಯ ಪದಾಧಿಕಾರಿಗಳು ಸಹ ಭಾಗವಹಿಸಲಿದ್ದಾರೆ.

ಧರ್ಮಸ್ಥಳದಲ್ಲಿ ಲೈಂಗಿಕ ದೌರ್ಜನ್ಯದ ಗುರುತುಗಳನ್ನು ಹೊಂದಿರುವ ಮಹಿಳೆಯರ ಶವಗಳು ಸೇರಿದಂತೆ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರರು ಹೇಳಿದ ನಂತರ ವಿವಾದ ಭುಗಿಲೆದ್ದಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT