ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಪ್ರವರ್ಗಗಳ ಸಂಖ್ಯೆ ಮರುವಿಂಗಡಣೆ ಸಾಧ್ಯವಿಲ್ಲ, ಆರ್ಥಿಕ ನೆರವಿನ ಭರವಸೆ ನೀಡಿದ ಸಿಎಂ

ಪ್ರವರ್ಗಗಳ ಸಂಖ್ಯೆ ಮರು ಮಾರ್ಪಡಣೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದು, ಆರ್ಥಿಕ ನೆರವು ಸೇರಿದಂತೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯದ ಭರವಸೆ ನೀಡಿದರು.

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯವನ್ನು ಎಡಗೈ, ಬಲ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಈ ಪ್ರವರ್ಗಗಳ ಸಂಖ್ಯೆ ಮರು ಮಾರ್ಪಡಣೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಕಾವೇರಿ ನಿವಾಸದಲ್ಲಿ ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುದೀರ್ಘ ಸಭೆ ನಡೆಸಿದರು. ಈ ವೇಳೆ ಅವರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಮುಖ್ಯಮಂತ್ರಿಗಳು ಪ್ರವರ್ಗಗಳ ಸಂಖ್ಯೆ ಮರು ಮಾರ್ಪಡಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದು, ಆರ್ಥಿಕ ನೆರವು ಸೇರಿದಂತೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯದ ಭರವಸೆ ನೀಡಿದರು. ಅಲ್ಲದೆ, ದೂರುಗಳನ್ನು ಪರಿಹರಿಸಲು ಭವಿಷ್ಯದಲ್ಲಿ ಸ್ಥಾಪಿಸಲು ಪ್ರಸ್ತಾಪಿಸಲಾದ ಪ್ರತ್ಯೇಕ ಪರಿಶಿಷ್ಟ ಜಾತಿಗಳ ಆಯೋಗವನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಆಯೋಗದ ವರದಿಯಂತೆ ಎಸ್ ಸಿ ಸಮುದಾಯವನ್ನು ಐದು ಗುಂಪುಗಳಾಗಿ ವರ್ಗೀಕರಣ ಮಾಡಿತ್ತು. ಗುಂಪು 1 ಅತೀ ಹಿಂದುಳಿದ ಜಾತಿಗಳು ಶೇ.1, ಗುಂಪು 2 ಎಡಗೈ ಜಾತಿಗಳು ಶೇ 6, ಗುಂಪು 3 ಬಲಗೈ ಜಾತಿಗಳು ಶೇ.5, ಗುಂಪು 4 ಬಂಜಾರ, ಬೋವಿ, ಕೊರಚ, ಕೊರಮ (ಅಸ್ಪೃಶ್ಯರಲ್ಲದ ಜಾತಿಗಳು) ಶೇ.4, ಗುಂಪು 5 ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿ ಶೇ.1 ಎಂದು ವರ್ಗೀಕರಣ ಮಾಡಿತ್ತು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಡ, ಬಲ ಹಾಗೂ ಇತರೆ ಎಂದು ಮೂರು ವಿಂಗಡನೆ ಮಾಡಿ ಮರುವರ್ಗೀಕರಿಸಿ ಒಳಮೀಸಲಾತಿ ಮರುಹಂಚಿಕೆಗೆ ತೀರ್ಮಾನಿಸಲಾಗಿದೆ. ಇದು ಸಮುದಾಯಗಳ ವಿರೋಧಕ್ಕೆ ಕಾರಣವಾಗಿದೆ.

ಶೇ.1 ಮೀಸಲಾತಿ ಶಿಫಾರಸಿನೊಂದಿಗೆ A ಗುಂಪಿನಲ್ಲಿದ್ದ 'ಅತ್ಯಂತ ಹಿಂದುಳಿದ' 59 ಸಮುದಾಯಗಳನ್ನು ಶೇ.5 ಮೀಸಲಾತಿ ಹೊಂದಿರುವ ಭೋವಿ, ಲಂಬಾಣಿ, ಕೊರಚ ಮತ್ತು ಕೊರಮ ಸಮುದಾಯಗಳಿರುವ ಗ್ರೂಪ್ ಸಿ'ಗೆ ಸೇರ್ಪಡೆಗೊಳಿಸಲಾಗಿದೆ.

ಆ ಹಿನ್ನೆಲೆಯಲ್ಲಿ ಡಾ. ಬಾಲಗುರುಮೂರ್ತಿ ನೇತೃತ್ವದ ನಿಯೋಗವು ಪ್ರವರ್ಗವನ್ನು ಮರು ಮಾರ್ಪಡಿಸಲು ಮತ್ತು ಶೇ.1 ಮೀಸಲಾತಿಯೊಂದಿಗೆ A ಗುಂಪಿಗೆ ವರ್ಗಾಯಿಸುವಂತೆ ಮನವಿ ಮಾಡಿತು. ಈ ವೇಳೆ ಈಗ ಅದು ಅಸಾಧ್ಯ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ.

'ದಕ್ಕಲಿಗ' ಸಮುದಾಯದ ಶಾಂತರಾಜು ಮತ್ತು 'ಶಿಳ್ಳೆಕ್ಯಾತ' ಸಮುದಾಯಗಳ ಮಂಜುನಾಥ್ ಅವರು ನಿಯೋಗದ ಭಾಗವಾಗಿದ್ದರು.

ಮಾಜಿ ಸಚಿವ ಎಚ್. ಆಂಜನೇಯ ಮತ್ತು ಅವರ ಸೋದರ ಮಾವ ಕೆ. ಎಸ್. ಬಸವಂತಪ್ಪ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಎಂಎಲ್‌ಸಿ ನಜೀರ್ ಅಹ್ಮದ್ ಸೇರಿದಂತೆ ಎಸ್‌ಸಿ ಎಡ ಸಮುದಾಯದ ಮುಖಂಡರು ಸಮುದಾಯಗಳ ಬೆಂಬಲಿಗರಾಗಿ ಹಾಜರಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT