ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ; ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ನಾಳೆ ಗೌರಿ ಹಬ್ಬ, ನಾಡಿದ್ದು ಗಣೇಶ ಹಬ್ಬ. ಇದಕ್ಕಾಗಿ ನಾಡಿನ ಜನತೆ ಭರ್ಜರಿ ಸಿದ್ದತೆ ಮಾಡಿಕೊಂಡಿದ್ದು, ಸಡಗರ-ಸಂಭ್ರಮದಿಂದ ಆಚರಿಸಲು ತಯಾರಿ ನಡೆಸಿದ್ದಾರೆ.

ಮಾರುಕಟ್ಟೆಯಲ್ಲಿ ತರಹೇವಾರಿ ಮೂರ್ತಿಗಳು ಲಗ್ಗೆ ಇಟ್ಟಿದ್ದು, ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ವಿಘ್ನ ವಿನಾಶಕ, ಪ್ರಥಮ ಪೂಜಿತನ ಅದ್ದೂರಿ ಆಚರಣೆಗೆ ಜನರು ಬೇಕಾದ ಅಗತ್ಯ ಸಿದ್ದತೆಯಲ್ಲಿ ತೊಡಗಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಗೌರಿ - ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.

ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ ಎಂದು ಕರೆ ನೀಡಿದ್ದಾರೆ.

ಹಬ್ಬವನ್ನು ಸಂಭ್ರಮ - ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್