ಸರ್ಕಾರಿ ಶಾಲೆ 
ರಾಜ್ಯ

ಬೆಂಗಳೂರು: ಶಾಲಾ ಕಟ್ಟಡ ಕುಸಿತ; ಮೂವರು ವಿದ್ಯಾರ್ಥಿಗಳಿಗೆ ಗಾಯ

ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ, ದರ್ಶನ್ ಎಂಬ ಬಾಲಕನ ಎಡಗಾಲಿಗೆ ಮೂಳೆ ಮುರಿತವಾಗಿದ್ದು, ತಲೆಗೆ ಗಾಯಗಳಾಗಿವೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಕಟ್ಟಡದ ಒಂದು ಭಾಗ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಗಾಯಾಳುಗಳನ್ನು ದರ್ಶನ್, ಭುವನ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಈ ಕಟ್ಟಡವನ್ನು ಒಂಬತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ದೇವನಹಳ್ಳಿಯ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಲಲಿತಮ್ಮ ಅವರು ಮಾತನಾಡಿ, ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ, ಬಾಲಕ ದರ್ಶನ್ ಎಡಗಾಲಿಗೆ ಮೂಳೆ ಮುರಿತವಾಗಿದ್ದು, ತಲೆಗೆ ಗಾಯಗಳಾಗಿವೆ. ಕುಮಾರ್ ಕೂಡ ಗಾಯಗೊಂಡಿದ್ದಾನೆಂದು ತಿಳಿಸಿದ್ದಾರೆ.

ಕುಮಾರ್ ಮತ್ತು ಭುವನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡವನ್ನು 2016 ರಲ್ಲಿ ನಿರ್ಮಿಸಲಾಗಿದ್ದು, ಕುಸಿತಕ್ಕೆ ಕಾರಣವೇನೆಂಬುದನ್ನು ತಿಳಿಯಲು ಎಂಜಿನಿಯರ್‌ಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರಿಂದ ನಾವು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ನ್ಯಾಯವ್ಯಾಪ್ತಿಯ ಪೊಲೀಸರೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಬಾಲಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT