ಬಾನು ಮುಷ್ತಾಕ್  
ರಾಜ್ಯ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದೆ, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ: ಬಾನು ಮುಷ್ತಾಕ್

ನಾಡ ಹಬ್ಬ ಹಿಂದೂ ಸಂಸ್ಕೃತಿಯ ಒಂದು ಭಾಗವಾಗಿದೆ. ಸಮಾಜದ ಎಲ್ಲಾ ವರ್ಗಗಳು ಇದನ್ನು ವಾರ್ಷಿಕ ಹಬ್ಬವಾಗಿ ಆನಂದಿಸುತ್ತವೆ. ದಸರಾ ಉತ್ಸವದ ಪ್ರಮುಖ ದೇವತೆ ಚಾಮುಂಡೇಶ್ವರಿ ದೇವಿಯ ಬಗ್ಗೆ ನನಗೆ ಗೌರವವಿದೆ.

ಹಾಸನ: ದಸರಾ ಉತ್ಸವವನ್ನು ಉದ್ಘಾಟಿಸಲು ರಾಜ್ಯ ಸರ್ಕಾರವು ತಮ್ಮನ್ನು ಆಹ್ವಾನಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು, ಈ ಗೌರವವನ್ನು ಪ್ರೀತಿಯಿಂದ ಸ್ವೀಕರಿಸುತ್ತೇನೆಂದು ಹೇಳಿದ್ದಾರೆ.

ರಾಜ್ಯದ ಸಂಸ್ಕೃತಿ, ಸಂಪ್ರದಾಯ ಮತ್ತು ಕಲೆಯನ್ನು ಶ್ರೀಮಂತಗೊಳಿಸುವ ನಾಡ ಹಬ್ಬವನ್ನು ಉದ್ಘಾಟಿಸುವ ದೊಡ್ಡ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನನಗೆ ನೀಡಿದೆ. ಇದನ್ನು ಪ್ರೀತಿಯಿಂದ ಸ್ವೀಕರಿಸುತ್ತೇನೆಂದು ಹೇಳಿದ್ದಾರೆ.

ನಾಡ ಹಬ್ಬ ಹಿಂದೂ ಸಂಸ್ಕೃತಿಯ ಒಂದು ಭಾಗವಾಗಿದೆ. ಸಮಾಜದ ಎಲ್ಲಾ ವರ್ಗಗಳು ಇದನ್ನು ವಾರ್ಷಿಕ ಹಬ್ಬವಾಗಿ ಆನಂದಿಸುತ್ತವೆ. ಲಕ್ಷಾಂತರ ಜನರು ಭಾಗವಹಿಸುವ ದಸರಾದ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ದಸರಾ ಉತ್ಸವದ ಪ್ರಮುಖ ದೇವತೆ ಚಾಮುಂಡೇಶ್ವರಿ ದೇವಿಯ ಬಗ್ಗೆ ನನಗೆ ಗೌರವವಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ತಾವು ಮಗುವಾಗಿದ್ದಾಗ ಪೋಷಕರೊಂದಿಗೆ ಜಂಬೂ ಸವಾರಿ ವೀಕ್ಷಿಸಿದ್ದ ಸಂದರ್ಭವನ್ನೂ ಬಾನು ಮುಷ್ತಾಕ್ ಅವರು ಸ್ಮರಿಸಿದ್ದಾರೆ.

ಬಾನು ಮುಷ್ತಾಕ್‌ಗೆ ನೀಡಿದ ಆಹ್ವಾನ ಮತ್ತು ವಿರೋಧ ಪಕ್ಷಗಳ ಆಕ್ಷೇಪಣೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ದಸರಾ ಧರ್ಮ ಮತ್ತು ಜಾತಿಗಿಂತ ಮೀರಿದ್ದು ಎಂದು ಹೇಳಿದ್ದಾರೆ.

ಈ ಉತ್ಸವವನ್ನು ಹಿಂದೆ ಕವಿ ನಿಸಾರ್ ಅಹ್ಮದ್ ಉದ್ಘಾಟಿಸಿದ್ದರು ಮತ್ತು ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಅವರ ನೇತೃತ್ವದಲ್ಲಿ ಆಚರಣೆಗಳು ನಡೆದಿವೆ. ಇದು ಎಲ್ಲರೂ ಆಚರಿಸುವ ಹಬ್ಬವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT