ಸತೀಶ್ ಜಾರಕಿಹೊಳಿ 
ರಾಜ್ಯ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡಿದರೆ ಪಿತೂರಿಯ ಹಿಂದೆ ಯಾರಿದ್ದಾರೆಂಬ ಸತ್ಯ ಹೊರಬರುತ್ತದೆ. ಅಗತ್ಯವಿದ್ದರೆ, ಇನ್ನೂ ಹೆಚ್ಚಿನ ಮಟ್ಟದ ತನಿಖೆ ನಡೆಸಬೇಕು.

ಬೆಳಗಾವಿ: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡಿದರೆ ನಮ್ಮಆಕ್ಷೇಪವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡಿದರೆ ಪಿತೂರಿಯ ಹಿಂದೆ ಯಾರಿದ್ದಾರೆಂಬ ಸತ್ಯ ಹೊರಬರುತ್ತದೆ. ಅಗತ್ಯವಿದ್ದರೆ, ಇನ್ನೂ ಹೆಚ್ಚಿನ ಮಟ್ಟದ ತನಿಖೆ ನಡೆಸಬೇಕು. ಜನರು ತಮ್ಮ ನಿಯಮಿತ ಕೆಲಸವನ್ನು ಬದಿಗಿಟ್ಟು ಧರ್ಮಸ್ಥಳದ ಬಗ್ಗೆ ಚರ್ಚಿಸುತ್ತಿದ್ದಾರೆಂದು ಹೇಳಿದರು.

ನ್ಯಾಯಾಲಯವು ತನಿಖೆಗೆ ನಿರ್ದೇಶಿಸಿದ ನಂತರ ಸರ್ಕಾರ ಎಸ್ಐಟಿ ರಚಿಸಿತ್ತು. ಕಳೆದ 15 ದಿನಗಳಿಂದ ಎಸ್ಐಟಿ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಪ್ರಕರಣವನ್ನು ರಾಜಕೀಯದೊಂದಿಗೆ ತಳುಕು ಹಾಕುವ ಪ್ರಯತ್ನಗಳನ್ನು ತಳ್ಳಿಹಾಕಿದ ಅವರು, "ಇದಕ್ಕೂ ಎಡ ಅಥವಾ ಬಲ ಪಂಥಗಳಿಗೂ ಯಾವುದೇ ಸಂಬಂಧವಿಲ್ಲ. ಇದು ರಾಜಕೀಯ ವಿಷಯವೂ ಅಲ್ಲ ಅಥವಾ ದೇಶಕ್ಕೆ ಸಂಬಂಧಿಸಿದ ವಿಷಯವೂ ಅಲ್ಲ. ಇದು ಸ್ಥಳೀಯ ಸಮಸ್ಯೆಯಾಗಿದ್ದು, ಅನಗತ್ಯವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT