ಬಿಎಂಟಿಸಿ ಬಸ್ 
ರಾಜ್ಯ

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC

ಅಪಘಾತದ ಸಮಯದಲ್ಲಿ ಬಸ್ ಚಾಲಕ ಸಂತೋಷ್ ಮತ್ತು ಕಂಡಕ್ಟರ್ ಭಾಸ್ಕರ್ ಕರ್ತವ್ಯದಲ್ಲಿದ್ದರು, 11 ವರ್ಷದ ಮಗು ಸೇರಿದಂತೆ ಮೂವರು ಜನರನ್ನು ಹೊತ್ತೊಯ್ಯುತ್ತಿದ್ದ ದ್ವಿಚಕ್ರ ವಾಹನವು ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದೆ.

ಬೆಂಗಳೂರು: ಎಸ್‌ಜೆಪಿ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ 11 ವರ್ಷದ ಬಾಲಕನ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಬಿಎಂಟಿಸಿ ಸ್ಪಷ್ಟನೆ ನೀಡಿದೆ.

ಅಪಘಾತದಲ್ಲಿ ಬಸ್ ಚಾಲಕನ ಯಾವುದೇ ತಪ್ಪಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೋಮವಾರ ಸ್ಪಷ್ಟಪಡಿಸಿದೆ.

ಅಪಘಾತದ ಸಮಯದಲ್ಲಿ ಬಸ್ ಚಾಲಕ ಸಂತೋಷ್ ಮತ್ತು ಕಂಡಕ್ಟರ್ ಭಾಸ್ಕರ್ ಕರ್ತವ್ಯದಲ್ಲಿದ್ದರು, 11 ವರ್ಷದ ಮಗು ಸೇರಿದಂತೆ ಮೂವರು ಜನರನ್ನು ಹೊತ್ತೊಯ್ಯುತ್ತಿದ್ದ ದ್ವಿಚಕ್ರ ವಾಹನವು ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದೆ ಎಂದು ಸಿಸಿಟಿವಿ ಪರಿಶೀಲನೆಯಿಂದ ತಿಳಿದುಬಂದಿದೆ. ದ್ವಿಚಕ್ರ ವಾಹನದ ಸವಾರ ಹಠಾತ್ತನೆ ಬ್ರೇಕ್ ಹಾಕಿದ್ದು, ಸ್ಕಿಡ್ ಆಗಿ ಎಲ್ಲರೂ ಕೆಳಗೆ ಬಿದ್ದಿದ್ದಾರೆ. ಬಾಲಕ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿದ್ದಾನೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಬಾಲಕ ಸಾವನ್ನಪ್ಪಿದ್ದಾನೆಂದು ಹೇಳಿದೆ.

ಹೆಚ್ಚಿನ ತನಿಖೆಗಾಗಿ ಘಟನೆಗೆ ಸಂಬಂಧಿಸಿದ ವಾಹನವನ್ನು ಪ್ರಸ್ತುತ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆದರಿಕೆ ನಡುವೆ 'ಆರ್ ಎಸ್ ಎಸ್' ಕುರಿತು ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ! ಇದರಲ್ಲಿ ಏನಿದೆ?

ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ: Donald Trump

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಡಿಸಿಎಂ ಆಗುತ್ತೀರೋ, ಜೈಲಿಗೆ ಹೋಗುತ್ತೀರೋ ಎಂದು ಬಿಜೆಪಿಯಿಂದ ಆಫರ್ ಬಂದಿತ್ತು, ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿಕೆಶಿ

ನಾವು ಹಿಂದುಳಿದ ಜಾತಿಗೆ ಸೇರಿಲ್ಲ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣಮೂರ್ತಿ- ಸುಧಾಮೂರ್ತಿ ನಿರಾಕರಣೆ!

SCROLL FOR NEXT