ಹಲಸೂರು ಕೆರೆ ಕಲ್ಯಾಣಿ ಬಳಿ ಇರುವ ಬಿಬಿಎಂಪಿ ಸಿಬ್ಬಂದಿ. 
ರಾಜ್ಯ

Greater Bengaluru Authority: ಪಾಲಿಕೆಗಳ ರಚನೆ ಬಳಿಕ ವಾರ್ಡ್ ಎಂಜಿನಿಯರ್‌ಗಳಿಂದ ಕೆರೆ-ರಸ್ತೆಗಳ ನಿರ್ವಹಣೆ!

ಪ್ರಸ್ತುತ, ವಾರ್ಡ್ ಗಳ ಎಂಜಿನಿಯರ್ ಗಳು ಒಂದು ತಂಡದೊಂದಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಚೇರಿಯಲ್ಲಿ ಮುಖ್ಯ ಎಂಜಿನಿಯರ್‌ಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಹೊಸ ನಿಗಮಗಳು ರಚನೆಯಾದ ನಂತರ ಕೆರೆಗಳು, ಮಳೆನೀರು ಚರಂಡಿಗಳು ಮತ್ತು ಪ್ರಮುಖ ರಸ್ತೆ ಮೂಲಸೌಕರ್ಯಗಳನ್ನು ಆಯಾ ವಾರ್ಡ್'ಗಳ ಎಂಜಿನಿಯರ್‌ಗಳು ನಿರ್ವಹಣೆ ಮಾಡಲಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರಸ್ತುತ, ವಾರ್ಡ್ ಗಳ ಎಂಜಿನಿಯರ್ ಗಳು ಒಂದು ತಂಡದೊಂದಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಚೇರಿಯಲ್ಲಿ ಮುಖ್ಯ ಎಂಜಿನಿಯರ್‌ಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ವಾರ್ಡ್'ಗಳನ್ನು 40,000 ಜನಸಂಖ್ಯೆಗೆ ವಿಂಗಡಿಸಲಾಗುತ್ತದೆ. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ಕೆರೆ, ಮಳೆನೀರು ಚರಂಡಿ ಮತ್ತು ಪ್ರಮುಖ ರಸ್ತೆ ನಿರ್ವಹಣೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗುತ್ತದೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಕೆರೆ ಇಲಾಖೆಯ ಮೂಲಗಳು ತಿಳಿಸಿವೆ.

ಅಧಿಕಾರಿಗಳ ಈ ನಡೆಯನ್ನು ಕೆಲ ನಿವಾಸಿಗಳು ಸ್ವಾಗತಿಸಿದ್ದಾರೆ. ಕೆರೆ ಅಭಿವೃದ್ಧಿ ಮತ್ತು ಇತರ ಚಟುವಟಿಕೆಗಳಿಗೆ ಅನುಮತಿ ಪಡೆಯುವುದು, ದೂರು ನೀಡಲು ಅಲೆದಾಡುವುದನ್ನು ಈ ಕ್ರಮ ನಿಯಂತ್ರಿಸುತ್ತದೆ ಎಂದು ಹೇಳಿದ್ದಾರೆ.

ಆದರೆ, ಕೆರೆ ಮತ್ತು ಒಳಚರಂಡಿ ನಿರ್ವಹಣೆಗೆಂದೇ ಅಧಿಕಾರಿಗಳನ್ನು ನಿಯೋಜನೆಗೊಳಿಸುವುದು ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಸ್ತುತ, ರಾಜಕಾಲುವೆ, ಕೆರೆ ನಿರ್ವಹಣೆಗಾಗಿ ನಿಯೋಜಿಸಲಾಗಿರುವ ಅಧಿಕಾರಿಗಳು ಭೂವಿಜ್ಞಾನ, ಜಲವಿಜ್ಞಾನ, ಪರಿಸರ ವಿಜ್ಞಾನ ಮತ್ತು ಲಿಮ್ನಾಲಜಿಯಲ್ಲಿ ಅಧ್ಯಯನದ ಹಿನ್ನೆಲೆಯನ್ನು ಹೊಂದಿರುವವರಾಗಿದ್ದಾರೆ.

ರಾಜಕಾಲುವೆ, ಕೆರೆ ನಿರ್ವಹಣೆಗೆ ಈ ಕ್ಷೇತ್ರದಲ್ಲಿ ತಜ್ಞರ ಅಗತ್ಯವಿದೆ. ಆದರೆ, ಇವುಗಳ ನಿರ್ವಹಣೆಗೆ ರಸ್ತೆ ಮೂಲಸೌಕರ್ಯ ಎಂಜಿನಿಯರ್‌ಗಳನ್ನು ನಿಯೋಜಿಸಿದರೆ, ಅದು ವಿಪತ್ತಿಗೆ ಕಾರಣವಾಗಬಹುದು ಎಂದು ಫ್ರೆಂಡ್ಸ್ ಆಫ್ ಲೇಕ್ಸ್‌ನ ರಾಮಪ್ರಸಾದ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT