ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕಲಾಸಿಪಾಳ್ಯದಲ್ಲಿ ಕೇಸರಿ ಶಾಲು ಹಾಕಿದ್ದ ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಮೂವರು ಕಿಡಿಗೇಡಿಗಳ ಬಂಧನ

ಕೂಲಿ ಕೆಲಸ ಮಾಡುತ್ತಿದ್ದ ಸ್ಲಿಂಧರ್ ಕುಮಾರ್ ಎಂಬಾತ ಟ್ರಾವೆಲ್ಸ್‌ ಕಂಪನಿಯಲ್ಲಿ ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌ ಕೆಲಸ ಮಾಡುತ್ತಿದ್ದು, ಈತನ ಮೇಲೆ ಆ.24 ರಂದು ರಾತ್ರಿ 9.30ರ ಸುಮಾರಿಗೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೇಸರಿ ಶಾಲು ಹಾಕಿಕೊಂಡು ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೊಬ್ಬನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆಯೊಂದು ನಗರದ ಕಲಾಸಿಪಾಳ್ಯದಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೂಲಿ ಕೆಲಸ ಮಾಡುತ್ತಿದ್ದ ಸ್ಲಿಂಧರ್ ಕುಮಾರ್ ಎಂಬಾತ ಟ್ರಾವೆಲ್ಸ್‌ ಕಂಪನಿಯಲ್ಲಿ ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌ ಕೆಲಸ ಮಾಡುತ್ತಿದ್ದು, ಈತನ ಮೇಲೆ ಆ.24 ರಂದು ರಾತ್ರಿ 9.30ರ ಸುಮಾರಿಗೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಕೇಸರಿ ಶಾಲು ಯಾಕೆ ಹಾಕಿಕೊಂಡಿದ್ದೀಯಾ ಎಂದು ಇಬ್ಬರು ಅಪರಿಚಿತ ಯುವಕರು ಸ್ಲಿಂಧರ್ ಕುಮಾರ್ ಅವರನ್ನು ಪ್ರಶ್ನೆ ಮಾಡಿದ್ದಾರೆ,

ಈ ಸಂದರ್ಭದಲ್ಲಿ ಯಾಕೆ ಆತನ ಮೇಲೆ ಹಲ್ಲೆ ಮಾಡುತ್ತಿದ್ದೀರಾ ಎಂದು ತಡೆಯಲು ಬಂದ ಟ್ರಾವೆಲ್ಸ್‌ ಮಾಲೀಕನ ಮೇಲೂ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಕೇಸರಿ ಶಾಲು ಯಾಕೋ ಹಾಕಿದ್ದೀಯಾ? ಎಂದು ಬೈದು, ಬಟ್ಟೆ ಹರಿದು ಹಾಕಿದ್ದಾರೆಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ರಾಯಲ್ ಟ್ರಾವೆಲ್ಸ್ ಸಾರಿಗೆ ಕಚೇರಿಯ ವ್ಯವಸ್ಥಾಪಕ ಹರಿಕೃಷ್ಣ ಅವರು ಕಲಾಸಿಪಾಳ್ಯ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತನ್ನು ಮೆಕ್ಯಾನಿಕ್ ಆಗಿರುವ ನಾಗವಾರ ನಿವಾಸಿ ಎಂ. ತಬ್ರೇಜ್ (30), ರೇಡಿಯಂ ಕತ್ತರಿಸುವ ಕೆಲಸ ಮಾಡುತ್ತಿರುವ ಬನಶಂಕರಿ ನಿವಾರಿ ಡಬ್ಲ್ಯೂ. ಇಮ್ರಾನ್ ಖಾನ್ (35), ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಕೃಷ್ಣಪ್ಪ ಗಾರ್ಡನ್ ನಿವಾಸಿ ಅಜೀಜ್ ಖಾನ್ (37) ಎಂದು ಗುರ್ತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT