ಡಿಕೆ.ಶಿವಕುಮಾರ್  
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಪರಿಹಾರದ ಹಣವನ್ನು ಸ್ವೀಕರಿಸದೆ 28,972 ಜನರು ನ್ಯಾಯಾಲಯಗಳ ಮೊರೆ ಹೋಗಿದ್ದಾರೆ . ಇವುಗಳನ್ನು ಇತ್ಯರ್ಥಪಡಿಸದೆ ಯೋಜನೆಯನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ.

ಬೆಂಗಳೂರು: ಭೂಸ್ವಾಧೀನಕ್ಕೆ ಸಂಬಂಧಿಸಿದ ವಿವಾದಗಳನ್ನು ಇತ್ಯರ್ಥಪಡಿಸದೆ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತವನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗಿನ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಹಾರದ ಹಣವನ್ನು ಸ್ವೀಕರಿಸದೆ 28,972 ಜನರು ನ್ಯಾಯಾಲಯಗಳ ಮೊರೆ ಹೋಗಿದ್ದಾರೆ . ಇವುಗಳನ್ನು ಇತ್ಯರ್ಥಪಡಿಸದೆ ಯೋಜನೆಯನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ವಿಚಾರವಾಗಿ ಸರ್ವ ಪಕ್ಷಗಳ ಹಾಗೂ ವಿಜಯಪುರ, ಬಾಗಲಕೋಟೆ ಭಾಗದ ಜನಪ್ರತಿನಿಧಿಗಳ, ರೈತ ಮುಖಂಡರ ಸಭೆ ನಡೆಸಲಾಗುವುದು. ರೈತರಿಗೂ ನಷ್ಟವಾಗದಂತಹ ಪರಿಹಾರ ಮೊತ್ತಕ್ಕೆ ಸರ್ವ ಸಮ್ಮತ ಒಪ್ಪಿಗೆ ದೊರೆತರೆ ಮಾತ್ರ ಯೋಜನೆ ಮುಂದುವರಿಯಬಹುದು ಎಂದು ತಿಳಿಸಿದರು.

ಕೆಲ ವಕೀಲರು ಹಾಗೂ ಭೂ ಮಾಲಕರು ಸೇರಿಕೊಂಡು ದುಪ್ಪಟ್ಟಿಗಿಂತ ಹೆಚ್ಚು ಪರಿಹಾರಕ್ಕೆ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಹೂಡಿದ್ದಾರೆ. 19,957 ಪ್ರಕರಣಗಳು ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿಯುಳಿದಿವೆ. 9,015 ಪ್ರಕರಣಗಳು ಬೇರೆ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ. ಆದರೆ, ಈ ಯೋಜನೆಯಡಿ ಸುಮಾರು 20 ಗ್ರಾಮಗಳು ಮುಳುಗಡೆಯಾಗಲಿವೆ.

ನಾನು ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ನಂತರ 14,817 ಪ್ರಕರಣಗಳಿಗೆ ಕೆಬಿಜಿಎನ್ ಎಲ್ ಅನ್ನು ಜವಾಬ್ದಾರಿ ತೆಗೆದುಕೊಳ್ಳಲಾಗಿದೆ. 5,086 ಪ್ರಕರಣಗಳನ್ನು ಪ್ರತಿವಾದಿಗಳು ತೆಗೆದುಕೊಂಡಿಲ್ಲ. 837 ಪ್ರಕರಣಗಳು ಇತ್ಯರ್ಥಗೊಂಡಿವೆ. 13,913 ಪ್ರಕರಣಗಳು ಬಾಕಿಯಿವೆ. ವಿವಿಧ ನ್ಯಾಯಾಲಯದಲ್ಲಿರುವ 749 ಪ್ರಕರಣದಲ್ಲಿ 46 ಪ್ರಕರಣಗಳು ಕೆಬಿಜಿಎನ್ ಎಲ್ ಪ್ರಕಾರ ಆದೇಶ ಬಂದಿದೆ. 949 ಪ್ರಕರಣಗಳನ್ನು ವಿಲೇವಾರಿ ಮಾಡಲು ಬಾಕಿ ಉಳಿದಿದೆ. ಧಾರವಾಡದಲ್ಲಿ 19, ಕಲಬುರಗಿ ನ್ಯಾಯಾಲಯದಲ್ಲಿ ಸುಮಾರು 90 ಪ್ರಕರಣಗಳಿಗೆ ತಡೆಯಾಜ್ಞೆ ಸಿಕ್ಕಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT