ಶೋಭಾ ಕರಂದ್ಲಾಜೆ 
ರಾಜ್ಯ

ಡಿ.ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದಾರೆ, ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ನವದೆಹಲಿ: ಮೈಸೂರು ಚಾಮುಂಡಿ ಬೆಟ್ಟದ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ.

ಇತ್ತೀಚೆಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು, ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು ಎಂದು ಕಿಡಿಕಾರಿದ್ದಾರೆ.

ಚಾಮುಂಡಿ ತಾಯಿ ಈ ನಾಡಿನ ಹಿಂದೂಗಳ ಪಾಲಿನ ಅಧಿದೇವತೆ, ಪೂಜನೀಯಳು, ದಸರಾ ಸಮಯದಲ್ಲಿ ಚಾಮುಂಡಿಗೆ ಪೂಜೆ ಮಾಡಿಯೇ ಮುನ್ನುಡಿ ಇಡಲಾಗುತ್ತದೆ. ತಮ್ಮ ಹೈಕಮಾಂಡ್ ನ್ನು ಸಮಾಧಾನಗೊಳಿಸಲು, ಖುಷಿಪಡಿಸಲು ಡಿ ಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದರು.

ಹಿಂದೂ ಜನರ ಭಾವನೆಗಳಿಗೆ ತಮ್ಮ ಮಾತಿನ ಮೂಲಕ ನೋವುಂಟುಮಾಡಿರುವ ಡಿ ಕೆ ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

ರಾಜ್ಯದಲ್ಲಿ ಒಪ್ಪಂದವಿಲ್ಲದೆ 'ಮನೆಗೆಲಸದವರ' ನೇಮಕ ಮಾಡಿಕೊಳ್ಳುವಂತಿಲ್ಲ: ಕರಡು ಮಸೂದೆಯಲ್ಲಿ ಏನಿದೆ?

ನಮ್ಮ ಆದ್ಯತೆಗಳಿಗೆ ತಕ್ಕಂತೆ ವ್ಯವಹಾರ: ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭಾರತದ ತಿರುಗೇಟು!

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಬಂಧನ

ರಾಜ್ಯದಲ್ಲಿ ಇಳುವರಿ, ಗುಣಮಟ್ಟ ಕುಸಿತ: ಕರ್ನಾಟಕಕ್ಕೆ ಶ್ರೀಗಂಧದ ಎಣ್ಣೆ ರಫ್ತು ಮಾಡುತ್ತಿದೆ ಆಸ್ಟ್ರೇಲಿಯಾ!

SCROLL FOR NEXT