ಗೃಹ ಸಚಿವ ಡಾ. ಜಿ. ಪರಮೇಶ್ವರ್ 
ರಾಜ್ಯ

ಧರ್ಮಸ್ಥಳ ಕೇಸ್: ಶೀಘ್ರಗತಿಯಲ್ಲಿ ತನಿಖೆ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ. ಜಿ.ಪರಮೇಶ್ವರ್

ಈ ವಿಚಾರದಲ್ಲಿ ಸರ್ಕಾರ ತಪ್ಪೆಸಗಿದೆ ಎಂದು ಬಿಜೆಪಿಯವರು ಯಾವ ಆಧಾರದಲ್ಲಿ ಹೇಳುತ್ತಿದ್ದಾರೆ. ಎಸ್‌ಐಟಿ ರಚಿಸಿದ್ದೇ ತಪ್ಪು ಮತ್ತು ಷಡ್ಯಂತ್ರ ಎಂದು ಹೇಳುತ್ತಿರುವುದು ವಿಪರ್ಯಾಸ.

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯ ಹೊರಗೆ ಬರಬೇಕು ಎಂದು ಕೋಟ್ಯಂತರ ಭಕ್ತರು ಕಾಯುತ್ತಿದ್ದಾರೆ. ಆರೋಪಿ ಚಿನ್ನಯ್ಯನನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಎಸ್‌ಐಟಿಯವರು ವರದಿ ನೀಡಲಿ. ಮುಂದಿನ ಚರ್ಚೆ ಆನಂತರ ಎಂದು ಹೇಳಿದರು.

ಈ ವಿಚಾರದಲ್ಲಿ ಸರ್ಕಾರ ತಪ್ಪೆಸಗಿದೆ ಎಂದು ಬಿಜೆಪಿಯವರು ಯಾವ ಆಧಾರದಲ್ಲಿ ಹೇಳುತ್ತಿದ್ದಾರೆ. ಎಸ್‌ಐಟಿ ರಚಿಸಿದ್ದೇ ತಪ್ಪು ಮತ್ತು ಷಡ್ಯಂತ್ರ ಎಂದು ಹೇಳುತ್ತಿರುವುದು ವಿಪರ್ಯಾಸ. ಮಹೇಶ್ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ ನಡೆಸಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ. ಮಾಹಿತಿ ಮತ್ತು ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆಯೇ ಹೊರತು, ಸರ್ಕಾರದ ನಿರ್ದೇಶನದಂತೆ ಅಲ್ಲ.

ಪ್ರಕರಣದಲ್ಲಿ ಎಸ್‌ಐಟಿ ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದು, ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ. ತನಿಖೆ ಬೇಗ ಮುಗಿಯುವುದು ಉತ್ತಮ ಎಂದು ಸರ್ಕಾರ ಕೂಡ ಅಭಿಪ್ರಾಯಪಟ್ಟಿದೆ. ದೂರುದಾರರ ಹೇಳಿಕೆಗಳು ಮತ್ತು ಅದರ ಪರಿಣಾಮಗಳನ್ನು ಎಸ್‌ಐಟಿ ಮತ್ತು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಯುರೋಪಿಯನ್ ಒಕ್ಕೂಟ ನಡುವೆ 'Mother of All Deals'ಗೆ ಶೀಘ್ರದಲ್ಲೇ ಅಂತಿಮ ಸಹಿ; ಒಪ್ಪಂದ 2027ರಿಂದಲೇ ಶುರು!

ವಿಮಾನ ಅಪಘಾತ: ಟೇಕ್ ಆಫ್ ವೇಳೆ ಜೆಟ್ ಅಪಘಾತ; 7 ಮಂದಿ ಸಾವು, ಬದುಕುಳಿದ ಓರ್ವ ಸಿಬ್ಬಂದಿ!

T20 ವಿಶ್ವಕಪ್‌ಗೂ ಮುನ್ನ PAK ಹೊಸ ಆಟ: ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸುವ ಬೆದರಿಕೆ!

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ- DCM ಡಿ.ಕೆ ಶಿವಕುಮಾರ್

WPL ಇತಿಹಾಸದಲ್ಲೇ ಇದೇ ಮೊದಲು: 'ಚೊಚ್ಚಲ ಶತಕ' ಸಿಡಿಸಿ, ಹೊಸ ದಾಖಲೆ ಬರೆದ ಸಿವರ್ ಬ್ರಂಟ್!

SCROLL FOR NEXT