ಅಪಘಾತಕ್ಕೀಡಾದ ಬಸ್ 
ರಾಜ್ಯ

ಬೆಳಗಾವಿ: ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್‌ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬೆಳಗಾವಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕನ ಅಜಾಗರೂಕ ಚಾಲನೆ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಬಸ್ ಘಾಟ್ ಪ್ರದೇಶದಲ್ಲಿ ತೀವ್ರ ತಿರುವು ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ನಂತರ ಬಸ್‌ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಸ್ಥಳೀಯರು ಹಾಗೂ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ರಕ್ಷಣೆ ನಡೆಸಿ ಹೊರತೆಗೆದರು. ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್‌ನಲ್ಲಿ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

ರಾಜ್ಯದಲ್ಲಿ ಒಪ್ಪಂದವಿಲ್ಲದೆ 'ಮನೆಗೆಲಸದವರ' ನೇಮಕ ಮಾಡಿಕೊಳ್ಳುವಂತಿಲ್ಲ: ಕರಡು ಮಸೂದೆಯಲ್ಲಿ ಏನಿದೆ?

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಬಂಧನ

ರಾಜ್ಯದಲ್ಲಿ ಇಳುವರಿ, ಗುಣಮಟ್ಟ ಕುಸಿತ: ಕರ್ನಾಟಕಕ್ಕೆ ಶ್ರೀಗಂಧದ ಎಣ್ಣೆ ರಫ್ತು ಮಾಡುತ್ತಿದೆ ಆಸ್ಟ್ರೇಲಿಯಾ!

Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್‌ಗೆ ESI

SCROLL FOR NEXT