ಜಾರಿ ನಿರ್ದೇಶನಾಲಯ (ಸಂಗ್ರಹ ಚಿತ್ರ) 
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು!

2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಬೆಂಗಳೂರಿನ ಇ.ಡಿ ಅಧಿಕಾರಿಗಳು, ಆರೋಪಿಗಳಿಂದ ಸ್ಥಿರಾಸ್ತಿ ಮತ್ತು ಬ್ಯಾಂಕ್ ಠೇವಣಿ ರೂಪದಲ್ಲಿ 5 ಕೋಟಿ ರೂವರೆಗಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಬೆಂಗಳೂರು: 2024ರಲ್ಲಿ ಬಯಲಾಗಿದ್ದ ವಾಲ್ಮೀಕಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಈವರೆಗೆ 5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಜಪ್ತಿ ಮಾಡಿರುವುದಾಗಿ ಪ್ರಕಟಿಸಿದೆ.

ಈ ಸಂಬಂಧ ಇ.ಡಿ. ಟ್ವೀಟ್ ಮಾಡಿದ್ದು ಅದರಲ್ಲಿ ಜಪ್ತಿಯ ವಿವರಣೆಗಳನ್ನು ನೀಡಿದೆ. 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಬೆಂಗಳೂರಿನ ಇ.ಡಿ ಅಧಿಕಾರಿಗಳು, ಆರೋಪಿಗಳಿಂದ ಸ್ಥಿರಾಸ್ತಿ ಮತ್ತು ಬ್ಯಾಂಕ್ ಠೇವಣಿ ರೂಪದಲ್ಲಿ 5 ಕೋಟಿ ರೂವರೆಗಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಗಳಾದ ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ, ಎಟಕೇರಿ ಸತ್ಯನಾರಾಯಣ ಎಂಬುವರಿಗೆ ಸೇರಿದ 4.45 ಕೋಟಿ ರೂ. ಮೌಲ್ಯದ ಭೂಮಿ, ಫ್ಲ್ಯಾಟ್ ಗಳು, ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೊ-ಆಪರೇಟಿವ್ ಬ್ಯಾಂಕ್ ನಲ್ಲಿದ್ದ 50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿರುವ ಹಣವನ್ನು ಇವರೂ ಸೇರಿದಂತೆ ಹಲವಾರು ವ್ಯಕ್ತಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದರಿಂದ ಇ.ಡಿ. ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ತನಿಖೆಯ ಭಾಗವಾಗಿ, ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಚಂದ್ರಶೇಖರನ್ ಎಂಬುವರು ಕಳೆದ ವರ್ಷ ಮೇ ತಿಂಗಳಲ್ಲಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಸಂದರ್ಭದಲ್ಲಿ ತಾವು ಬರೆದಿದ್ದ ಡೆತ್ ನೋಟ್ ನಲ್ಲಿ, ವಾಲ್ಮೀಕಿ ಪ್ರಕರಣದಲ್ಲಿ ಕೋಟ್ಯಂತರ ರೂ.ಗಳ ಅಕ್ರಮವಾಗಿತ್ತೆಂದು ಆರೋಪಿಸಲಾಗಿತ್ತು.

ತನಿಖೆಯಲ್ಲಿ ಇದರ ಮೊತ್ತ 187 ಕೋಟಿ ರೂ.ವರೆಗೆ ಮುಟ್ಟಿರುವುದಾಗಿ ಬೆಳಕಿಗೆ ಬಂದಿತ್ತು. ಮರಣ ಪತ್ರದಲ್ಲಿ, ‘ಮೇಲಿನವರ ಆದೇಶದಂತೆ ನಿಗಮದ ಹಣವನ್ನು ಬೇರೆ–ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ’ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ, ನಿಗಮವು ನಡೆಸಿದ ಆಂತರಿಕ ಪರಿಶೀಲನೆಯಲ್ಲಿ ₹89.62 ಕೋಟಿ ಅಕ್ರಮವಾಗಿ ವರ್ಗಾವಣೆ ಆಗಿರುವುದು ಪತ್ತೆಯಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!

SCROLL FOR NEXT