ಕ್ರೀಡಾಪಟುಗಳೊಂದಿಗೆ ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ; ಒಲಿಂಪಿಕ್ಸ್ ಪದಕ ಗೆದ್ದರೆ 5 ಕೋಟಿ ರೂ ನಗದು: CM

ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು.

ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

ಚಿನ್ನ ಗೆದ್ದವರಿಗೆ 7 ಲಕ್ಷ ರೂ., ಬೆಳ್ಳಿ ಪದಕಕ್ಕೆ ₹5 ಲಕ್ಷ ಮತ್ತು ಕಂಚು ಪದಕಕ್ಕೆ ₹3 ಲಕ್ಷ ನೀಡಲಾಗುವುದು ಎಂದು ತಿಳಿಸಿದ್ದಾರೆ. ಜೊತೆಗೆ, ನಮ್ಮ ರಾಜ್ಯದವರು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದರೆ ₹5 ಕೋಟಿ ನಗದು ಕೊಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ದೊರಕಲೆಂದು ಹಾರೈಸಿದರು.

2015 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಿನ್ನದ ಪದಕ ಗೆದ್ದ ವಿಜೇತರಿಗೆ 5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ 3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಲಕ್ಷ ರೂ. ನೀಡುವುದಾಗಿ ತಿಳಿಸಲಾಗಿತ್ತು, ನಮ್ಮ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯವರು ಪದಕ ವಿಜೇತರಿಗೆ ನೀಡಲಾಗುವ ನಗದು ಪುರಸ್ಕಾರವನ್ನು ಹೆಚ್ಚಿಸಬೇಕೆಂದು ಕೋರಿದ್ದರು. ಅದರಂತೆ ಮನವಿಯನ್ನು ಪುರಸ್ಕರಿಸಿ, ಗೆದ್ದ ಪ್ರತಿಯೊಬ್ಬ ಪದಕ ವಿಜೇತರಿಗೂ ನಗದು ಪುರಸ್ಕಾರವನ್ನು ನೀಡಲು ತೀರ್ಮಾನಿಸಿದ್ದೇನೆ.

ಕ್ರೀಡಾಪಟುಗಳು ಪದಕ ಗೆಲ್ಲಲು ಸಹಕರಿಸುವ ಮ್ಯಾನೇಜರ್ ಹಾಗೂ ತರಬೇತುದಾರರಿಗೂ ನಗದು ಪುರಸ್ಕಾರವನ್ನು ನೀಡಲಾಗುವುದು. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಕ್ರೀಡಾಪಟುಗಳ ಎಲ್ಲ ಬೇಡಿಕೆಗಳನ್ನು ಮುಂಚಿನಿಂದಲೂ ಈಡೇರಿಸುತ್ತಾ ಬಂದಿದ್ದೇನೆ. ಕ್ರೀಡೆಯೊಂದಿಗೆ ಶಿಕ್ಷಣವನ್ನೂ ಪಡೆಯಬೇಕು.

ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್ ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ. ಕ್ರೀಡಾಪಟು ಸುನಿಲ್ ಭಾಟಿಯವರು ಗ್ರೂಪ್ -1 ಸ್ಥಾನ ಸಿಕ್ಕಿದ್ದು ಪೋಲಿಸ್ ಅಬಕಾರಿ ಇಲಾಖೆಯಲ್ಲಿ ಡಿವೈಎಸ್‌ಪಿಯಾಗಿದ್ದಾರೆ. ಬಡ್ತಿಯಾಗಿ ಉನ್ನತ ಹುದ್ದೆಗೆ ಹೋಗುವ ಅವಕಾಶಗಳೂ ಇರುತ್ತವೆ.

ಬಜೆಟ್ ನಲ್ಲಿ ಘೋಷಿಸಿರುವಂತೆ ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ರೂ., ಬೆಳ್ಳಿ ಗೆದ್ದವರಿಗೆ 3 ಕೋಟಿ ರೂ. ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು.

ಬಹುಮಾನ ಗೆದ್ದರೆ ಅದಕ್ಕಿಂತ ಸಂತೋಷ ಕೊಡುವ ವಿಚಾರ ಮತ್ತೊಂದಿಲ್ಲ. ಸೋಲು - ಗೆಲುವು ಇದ್ದೆ ಇರುತ್ತದೆ, ಆದರೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸಾಮರ್ಥ್ಯವಿದ್ದರೆ ಮಾತ್ರ ಒಲಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯ. ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕೆಂದು ಸಲಹೆ ನೀಡಲು ಬಯಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವನ್ನು ವಿಸ್ತರಿಸಿದ ಚುನಾವಣಾ ಆಯೋಗ!

ಅತ್ಯುನ್ನತ ಶಿಕ್ಷಣ ಪಡೆದು ಅಮೆರಿಕ ಬಿಟ್ಟು ಹೋಗುವುದು ನಾಚಿಕೆಗೇಡಿನ ಸಂಗತಿ: ಭಾರತೀಯರ ವಿರುದ್ಧ ಟ್ರಂಪ್ ಆಕ್ರೋಶ

ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಮೀಸಲಾತಿ ಜಾರಿಗೆ- ಸಿಎಂ ಸಿದ್ದರಾಮಯ್ಯ

ದೀರ್ಘಕಾಲದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ; ಶೀಘ್ರವೇ...

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು

SCROLL FOR NEXT