ಸಾಂದರ್ಭಿಕ ಚಿತ್ರ online desk
ರಾಜ್ಯ

ಬೆಂಗಳೂರು: ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ..!

ಗುರುದ್ವಾರದ ಶೌಚಾಲಯದಲ್ಲಿ ನಾಲ್ಕು ಆರ್​​ಡಿಎಕ್ಸ್ ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಬೆಂಗಳೂರು: ನಗರದ ಹಲಸೂರು ಕೆರೆ ಸಮೀಪವಿರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.

4 ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

`De-Brahminize Dravidistan’ ಎಂಬ ಸಂಘಟನೆಯಿಂದ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಗುರುದ್ವಾರದ ಅಧಿಕೃತ ಮೇಲ್ ಐಡಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ.

ಗುರುದ್ವಾರದ ಶೌಚಾಲಯದಲ್ಲಿ ನಾಲ್ಕು ಆರ್​​ಡಿಎಕ್ಸ್ ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ವರದಿಗಳು ತಿಳಿಸಿವೆ.

ಇತ್ತೀಚೆಗೆ ನಗರದ ಸಿಟಿ ಸಿವಿಲ್ ಕೋರ್ಟ್‌ಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಬಂದಿದ್ದು, ಈ ವಿಷಯ ತಿಳಿದು ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್‌ಗಾಗಿ ಹುಡುಕಾಟ ನಡೆಸಿತ್ತು. ಆದರೆ, ಯಾವುದೇ ವಸ್ತುಗಳು ಪತ್ತೆಯಾಗಿರಲಿಲ್ಲ ನಂತರ ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು.

ಅದಕ್ಕೂ ಮುನ್ನ ಬೆಂಗಳೂರು ಹಾಗೂ ಕಲಬುರಗಿ ವಿಮಾನ ನಿಲ್ದಾಣಗಳಿಗೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಕಚೇರಿಗೆ ಹಾಗೂ ಹಲವು ಶಾಲೆಗಳಿಗೂ ಇಂತಹ ಹುಸಿ ಬಾಂಬ್‌ ಬೆದರಿಕೆಗಳು ಬಂದಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!