ಸಂಗ್ರಹ ಚಿತ್ರ 
ರಾಜ್ಯ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಬಿಟ್ಟು ಹೋದ ಜಾತಿ-ಉಪ ಜಾತಿ ಸೇರ್ಪಡೆಗಾಗಿ ಅವಧಿ ಸೆಪ್ಟೆಂಬರ್ 1ರವರೆಗೆ ವಿಸ್ತರಣೆ

ಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳೂ ಸೇರಿದಂತೆ ಎಲ್ಲಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರಕಾರದ ಆದೇಶಾನುಸಾರ ಕೈಗೊಳ್ಳಲು ಆಯೋಗ ಮುಂದಾಗಿದೆ.

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲು ಸಮೀಕ್ಷೆಯ ಅವಧಿಯನ್ನು ಸೆಪ್ಟೆಂಬರ್ 1ರವರೆಗೂ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳೂ ಸೇರಿದಂತೆ ಎಲ್ಲಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರಕಾರದ ಆದೇಶಾನುಸಾರ ಕೈಗೊಳ್ಳಲು ಆಯೋಗ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಆ.22ರಂದು ಜಾತಿ, ಉಪಜಾತಿಗಳ ಪಟ್ಟಿ ಮಾಡಿ, ಅದರಲ್ಲಿಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ 7 ದಿನಗಳ ಒಳಗೆ ಅವುಗಳ ಮಾಹಿತಿ, ಸಲಹೆ ನೀಡಲು ಗಡುವು ನೀಡಲಾಗಿತ್ತು.

ಸಾರ್ವಜನಿಕರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಕೋರಿಕೆ ಮೇರೆಗೆ ಸೆ.1ರಂದು ಸಂಜೆ 5 ಗಂಟೆವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್‌ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ಮನವಿಗಳನ್ನು ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್‌ ಟ್ಯಾಂಕ್‌ ಬಂಡ್‌ ಪ್ರದೇಶ, ವಸಂತನಗರ, ಬೆಂಗಳೂರು ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

News wrap 12-02-2026| ನಾನು ರಾಜಕಾರಣ ಮಾಡೋಕೇ ದಿಲ್ಲಿಗೆ ಬಂದಿರೋದು- ಡಿಕೆ ಶಿವಕುಮಾರ್; ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಬ್ರೇಕ್; ರಾಹುಲ್ ಗಾಂಧಿ ಫೋಟೋ ಎಡಿಟ್: ಶಾಸಕ ಆರಗ ಜ್ಞಾನೇಂದ್ರ PA ಬಂಧನ

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಮಾರಾಟವಾಗದೇ ಉಳಿದದ್ದಾ? or ಕುಡಿದು ಉಳಿದದ್ದಾ?: ದೆಹಲಿ ಸ್ಟೇಡಿಯಂ ಸಿಬ್ಬಂದಿ ಪಾನೀಯ ತುಂಬುತ್ತಿರುವ Video Viral

SCROLL FOR NEXT