ವೀರೇಂದ್ರ ಪಪ್ಪಿ 
ರಾಜ್ಯ

ಬೆಟ್ಟಿಂಗ್ ಪ್ರಕರಣ: ನಾನು ಸತ್ತರೆ ED ಅಧಿಕಾರಿಗಳೇ ಹೊಣೆ; ಶಾಸಕ ವೀರೇಂದ್ರ ಆರೋಪ

ಕುಡಿಯಲು ಅಶುದ್ಧ ನೀರನ್ನು ನೀಡಿದ್ದಾರೆ. ಪ್ಲಾಸ್ಟಿಕ್‌ ಕಂಟೇನರ್‌ನಲ್ಲಿ ಊಟ ಒದಗಿಸಿದ್ದಾರೆ. ಕೂರಲು ಕುರ್ಚಿಯನ್ನೂ ನೀಡಿಲ್ಲ. ಸರಿಯಾದ ಕೋಣೆಯಲ್ಲಿ ಇರಿಸಿಲ್ಲ.

ಬೆಂಗಳೂರು: ಇ.ಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದು, ನಾನು ಸತ್ತರೆ ಅಧಿಕಾರಿಗಳೇ ಹೊಣೆ ಎಂದು ಆನ್‌ಲೈನ್‌, ಆಫ್‌ಲೈನ್‌ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಆರೋಪಿಸಿದ್ದಾರೆ.

ಕಸ್ಟಡಿಯಲ್ಲಿ ಇ.ಡಿ ಅಧಿಕಾರಿಗಳು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ, ಕಿರುಕುಳ ನೀಡಿದ್ದಾರೆ. ಕುಡಿಯಲು ಅಶುದ್ಧ ನೀರನ್ನು ನೀಡಿದ್ದಾರೆ. ಪ್ಲಾಸ್ಟಿಕ್‌ ಕಂಟೇನರ್‌ನಲ್ಲಿ ಊಟ ಒದಗಿಸಿದ್ದಾರೆ. ಕೂರಲು ಕುರ್ಚಿಯನ್ನೂ ನೀಡಿಲ್ಲ. ಸರಿಯಾದ ಕೋಣೆಯಲ್ಲಿ ಇರಿಸಿಲ್ಲ, ನಾನು ಸತ್ತರೆ, ಅದಕ್ಕೆ ಇ.ಡಿ ಅಧಿಕಾರಿಗಳೇ ಹೊಣೆ ಎಂದಿದ್ದಾರೆ.

ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಸಿ.ವೀರೇಂದ್ರ ಅವರನ್ನು ಬೆಂಗಳೂರು ನಗರ 35ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು ಆ.28ರವರೆಗೆ ಇ.ಡಿ ಕಸ್ಟಡಿಗೆ ನೀಡಿದ್ದರು. ಕಸ್ಟಡಿ ಅವಧಿ ಮುಗಿದ ಕಾರಣ ಗುರುವಾರ ಸಂಜೆ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಕೆ.ಸಿ.ವೀರೇಂದ್ರ ಅವರು ಇ.ಡಿ ಕಸ್ಟಡಿ ತಮಗೆ ನೀಡುತ್ತಿರುವ ಕಿರುಕುಳ ಬಗ್ಗೆ ಹೇಳಿಕೊಂಡಿದ್ದಾರೆ. ವೀರೇಂದ್ರ ಪರ ಹಾಜರಾಗಿದ್ದ ಹಿರಿಯ ವಕೀಲರಾದ ಕಿರಣ್ ಜವಳಿ ಹಾಗೂ ಎಚ್‌.ಎಸ್.ಚಂದ್ರಮೌಳಿ, 'ಕೆ.ಸಿ.ವೀರೇಂದ್ರ ಬಂಧನದ ವೇಳೆ ಇ.ಡಿ ಅಧಿಕಾರಿಗಳು ಸೂಕ್ತ ನ್ಯಾಯಿಕ ಪ್ರಕ್ರಿಯೆ ಪಾಲನೆ ಮಾಡಿಲ್ಲ. ಯಾವ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ನೀಡಿಲ್ಲ, ಅಧಿಕಾರಿಗಳು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ' ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, 'ಯಾವ ಪ್ರಕರಣದಲ್ಲಿ ಇಸಿಐಆರ್ ದಾಖಲಿಸಿದ್ದೀರಿ' ಎಂದು ಇ.ಡಿ ಅಧಿಕಾರಿಗಳನ್ನು ಪ್ರಶ್ನಿಸಿದರು. ಆರೋಪಿಗೆ ಸೂಕ್ತ ಕಾರಣ ನೀಡದೆ ಬಂಧಿಸಬಾರದು. ಕೋರ್ಟ್‌ಗೆ ಬಂದ ಮೇಲೆ ಯಾವುದೋ ಪ್ರಕರಣಗಳನ್ನು ಸೇರಿಸಬಾರದು, ನಿಮ್ಮದು ಯಾವ ರೀತಿಯ ತನಿಖೆ ಎಂದು ಇ.ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಆರೋಪಿಯನ್ನು 14 ದಿನಗಳ ಕಸ್ಟಡಿಗೆ ನೀಡಬೇಕು ಎಂಬ ಇ.ಡಿ ಮನವಿಯನ್ನು ಮೊದಲು ತಿರಸ್ಕರಿಸಿ, ಬಳಿಕ ಆರು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದರು. ಅಲ್ಲದೇ ಆರೋಪಿಗೆ ಶುದ್ದೀಕರಿಸಿದ ನೀರು, ಕೂರಲು ಕುರ್ಚಿ ಒದಗಿಸಬೇಕು. ದಿನಕ್ಕೆ 30 ನಿಮಿಷ ತಮ್ಮ ವಕೀಲರನ್ನು ಭೇಟಿ ಮಾಡಲು ಅವರಿಗೆ ಅವಕಾಶ ಒದಗಿಸಬೇಕು ಎಂದು ಇ.ಡಿ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಹಿಂಭಾಗದಲ್ಲಿರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ..!

SCROLL FOR NEXT