ವೀರೇಂದ್ರ ಪಪ್ಪಿ 
ರಾಜ್ಯ

ಬೆಟ್ಟಿಂಗ್ ಪ್ರಕರಣ: ನಾನು ಸತ್ತರೆ ED ಅಧಿಕಾರಿಗಳೇ ಹೊಣೆ; ಶಾಸಕ ವೀರೇಂದ್ರ ಆರೋಪ

ಕುಡಿಯಲು ಅಶುದ್ಧ ನೀರನ್ನು ನೀಡಿದ್ದಾರೆ. ಪ್ಲಾಸ್ಟಿಕ್‌ ಕಂಟೇನರ್‌ನಲ್ಲಿ ಊಟ ಒದಗಿಸಿದ್ದಾರೆ. ಕೂರಲು ಕುರ್ಚಿಯನ್ನೂ ನೀಡಿಲ್ಲ. ಸರಿಯಾದ ಕೋಣೆಯಲ್ಲಿ ಇರಿಸಿಲ್ಲ.

ಬೆಂಗಳೂರು: ಇ.ಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದು, ನಾನು ಸತ್ತರೆ ಅಧಿಕಾರಿಗಳೇ ಹೊಣೆ ಎಂದು ಆನ್‌ಲೈನ್‌, ಆಫ್‌ಲೈನ್‌ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಆರೋಪಿಸಿದ್ದಾರೆ.

ಕಸ್ಟಡಿಯಲ್ಲಿ ಇ.ಡಿ ಅಧಿಕಾರಿಗಳು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ, ಕಿರುಕುಳ ನೀಡಿದ್ದಾರೆ. ಕುಡಿಯಲು ಅಶುದ್ಧ ನೀರನ್ನು ನೀಡಿದ್ದಾರೆ. ಪ್ಲಾಸ್ಟಿಕ್‌ ಕಂಟೇನರ್‌ನಲ್ಲಿ ಊಟ ಒದಗಿಸಿದ್ದಾರೆ. ಕೂರಲು ಕುರ್ಚಿಯನ್ನೂ ನೀಡಿಲ್ಲ. ಸರಿಯಾದ ಕೋಣೆಯಲ್ಲಿ ಇರಿಸಿಲ್ಲ, ನಾನು ಸತ್ತರೆ, ಅದಕ್ಕೆ ಇ.ಡಿ ಅಧಿಕಾರಿಗಳೇ ಹೊಣೆ ಎಂದಿದ್ದಾರೆ.

ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಸಿ.ವೀರೇಂದ್ರ ಅವರನ್ನು ಬೆಂಗಳೂರು ನಗರ 35ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು ಆ.28ರವರೆಗೆ ಇ.ಡಿ ಕಸ್ಟಡಿಗೆ ನೀಡಿದ್ದರು. ಕಸ್ಟಡಿ ಅವಧಿ ಮುಗಿದ ಕಾರಣ ಗುರುವಾರ ಸಂಜೆ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಕೆ.ಸಿ.ವೀರೇಂದ್ರ ಅವರು ಇ.ಡಿ ಕಸ್ಟಡಿ ತಮಗೆ ನೀಡುತ್ತಿರುವ ಕಿರುಕುಳ ಬಗ್ಗೆ ಹೇಳಿಕೊಂಡಿದ್ದಾರೆ. ವೀರೇಂದ್ರ ಪರ ಹಾಜರಾಗಿದ್ದ ಹಿರಿಯ ವಕೀಲರಾದ ಕಿರಣ್ ಜವಳಿ ಹಾಗೂ ಎಚ್‌.ಎಸ್.ಚಂದ್ರಮೌಳಿ, 'ಕೆ.ಸಿ.ವೀರೇಂದ್ರ ಬಂಧನದ ವೇಳೆ ಇ.ಡಿ ಅಧಿಕಾರಿಗಳು ಸೂಕ್ತ ನ್ಯಾಯಿಕ ಪ್ರಕ್ರಿಯೆ ಪಾಲನೆ ಮಾಡಿಲ್ಲ. ಯಾವ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ನೀಡಿಲ್ಲ, ಅಧಿಕಾರಿಗಳು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ' ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, 'ಯಾವ ಪ್ರಕರಣದಲ್ಲಿ ಇಸಿಐಆರ್ ದಾಖಲಿಸಿದ್ದೀರಿ' ಎಂದು ಇ.ಡಿ ಅಧಿಕಾರಿಗಳನ್ನು ಪ್ರಶ್ನಿಸಿದರು. ಆರೋಪಿಗೆ ಸೂಕ್ತ ಕಾರಣ ನೀಡದೆ ಬಂಧಿಸಬಾರದು. ಕೋರ್ಟ್‌ಗೆ ಬಂದ ಮೇಲೆ ಯಾವುದೋ ಪ್ರಕರಣಗಳನ್ನು ಸೇರಿಸಬಾರದು, ನಿಮ್ಮದು ಯಾವ ರೀತಿಯ ತನಿಖೆ ಎಂದು ಇ.ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಆರೋಪಿಯನ್ನು 14 ದಿನಗಳ ಕಸ್ಟಡಿಗೆ ನೀಡಬೇಕು ಎಂಬ ಇ.ಡಿ ಮನವಿಯನ್ನು ಮೊದಲು ತಿರಸ್ಕರಿಸಿ, ಬಳಿಕ ಆರು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದರು. ಅಲ್ಲದೇ ಆರೋಪಿಗೆ ಶುದ್ದೀಕರಿಸಿದ ನೀರು, ಕೂರಲು ಕುರ್ಚಿ ಒದಗಿಸಬೇಕು. ದಿನಕ್ಕೆ 30 ನಿಮಿಷ ತಮ್ಮ ವಕೀಲರನ್ನು ಭೇಟಿ ಮಾಡಲು ಅವರಿಗೆ ಅವಕಾಶ ಒದಗಿಸಬೇಕು ಎಂದು ಇ.ಡಿ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT