ಸಾಂದರ್ಭಿಕ ಚಿತ್ರ 
ರಾಜ್ಯ

40 ಇಲಾಖೆಗಳಿಗೆ ಹೊಸ ನೇಮಕಾತಿ-ವೇತನ ಪಾವತಿ: ಎಲ್ಲಿಂದ ಬರುತ್ತೆ ಹಣ? ಸರ್ಕಾರದ ಚಿತ್ತ SCSP/TSP ನಿಧಿಯತ್ತ!

ಸರ್ಕಾರಕ್ಕೆ ವಿವಿಧ ಇಲಾಖೆಗಳ ಅಡಿಯಲ್ಲಿ SC/ST ಗಳಿಗೆ ಸಬ್ಸಿಡಿಗಳನ್ನು ಕಡಿತಗೊಳಿಸಬೇಕಾಗುತ್ತದೆ, ಇಲ್ಲವೇ ಪಾವತಿ ವಿಳಂಬ ಮಾಡಬೇಕಾಗುತ್ತದೆ. ಏಕೆಂದರೆ ಇದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಆಂತರಿಕ ಕೋಟಾ ಜಾರಿಗೆ ತರುವ ಭಾಗವಾಗಿ 40 ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.76 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಆದರೆ ಅದಕ್ಕೆ ಪಾವತಿಸಲು ಹಣ ಎಲ್ಲಿಂದ ಬರುತ್ತದೆ? ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ವೇತನಕ್ಕೆ ಹೋಲಿಸಿದರೆ 8,000 ರಿಂದ 10,000 ಕೋಟಿ ರೂ.ಗಳಿಗಿಂತ ಹೆಚ್ಚಿನ ವೆಚ್ಚವನ್ನು ಪೂರೈಸಲು ಸರ್ಕಾರವು ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅನುದಾನಗಳ ಮೇಲೆ ಕಣ್ಣಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದರಿಂದ ರಾಜ್ಯದ ಬದ್ಧತಾ ವೆಚ್ಚವೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರಕ್ಕೆ ವಿವಿಧ ಇಲಾಖೆಗಳ ಅಡಿಯಲ್ಲಿ SC/ST ಗಳಿಗೆ ಸಬ್ಸಿಡಿಗಳನ್ನು ಕಡಿತಗೊಳಿಸಬೇಕಾಗುತ್ತದೆ, ಇಲ್ಲವೇ ಪಾವತಿ ವಿಳಂಬ ಮಾಡಬೇಕಾಗುತ್ತದೆ. ಏಕೆಂದರೆ ಇದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂದು ಹೇಳಲಾಗುತ್ತಿದೆ.

ಉದಾಹರಣೆಗೆ, ಕೈಗಾರಿಕಾ ಇಲಾಖೆ ಮಾತ್ರ SCSP/TSP ಅಡಿಯಲ್ಲಿ ಸುಮಾರು 800 ಕೋಟಿ ರೂ. ಸಬ್ಸಿಡಿ ವಿತರಿಸಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ. ಇದನ್ನೇ ಬೇರೆಡೆಗೆ ತಿರುಗಿಸಿ ನೌಕರರ ಸಂಬಳಕ್ಕಾಗಿ ಬಳಸಲಾಗುತ್ತದೆ ಎಂದು ದಲಿತ ಸಮುದಾಯದ ಕಾಂಗ್ರೆಸ್ ನಾಯಕರೊಬ್ಬರು ಆರೋಪಿಸಿದ್ದಾರೆ. ಸರ್ಕಾರವು 2025-26ರ ಬಜೆಟ್‌ನಲ್ಲಿ ಐದು ಖಾತರಿಗಳಿಗಾಗಿ ವಾರ್ಷಿಕವಾಗಿ 51,034 ಕೋಟಿ ರೂ.ಗಳನ್ನು ಮತ್ತು SCSP/TSP ಅನುದಾನಗಳಿಗಾಗಿ 42,018 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಮೂಲಗಳ ಪ್ರಕಾರ, ಆದಾಯ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಆದ್ಯತೆಯ ಆಧಾರದ ಮೇಲೆ ಸುಮಾರು 25,000 ಖಾಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಸರ್ಕಾರವು ಹಂತಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆಯಿದೆ.

ಗೃಹ ಇಲಾಖೆ ಸೇರಿದಂತೆ ಸುಮಾರು 40,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಆಶಿಸಿದ್ದಾರೆ. ಆಂತರಿಕ ಕೋಟಾ ಅನುಷ್ಠಾನಕ್ಕೆ ಆದೇಶ ಹೊರಡಿಸಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DAPR) ಇನ್ನೂ ನೇಮಕಾತಿ ಮೇಲಿನ ನಿಷೇಧವನ್ನು ತೆಗೆದುಹಾಕಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT