ಸಾಂದರ್ಭಿಕ ಚಿತ್ರ 
ರಾಜ್ಯ

40 ಇಲಾಖೆಗಳಿಗೆ ಹೊಸ ನೇಮಕಾತಿ-ವೇತನ ಪಾವತಿ: ಎಲ್ಲಿಂದ ಬರುತ್ತೆ ಹಣ? ಸರ್ಕಾರದ ಚಿತ್ತ SCSP/TSP ನಿಧಿಯತ್ತ!

ಸರ್ಕಾರಕ್ಕೆ ವಿವಿಧ ಇಲಾಖೆಗಳ ಅಡಿಯಲ್ಲಿ SC/ST ಗಳಿಗೆ ಸಬ್ಸಿಡಿಗಳನ್ನು ಕಡಿತಗೊಳಿಸಬೇಕಾಗುತ್ತದೆ, ಇಲ್ಲವೇ ಪಾವತಿ ವಿಳಂಬ ಮಾಡಬೇಕಾಗುತ್ತದೆ. ಏಕೆಂದರೆ ಇದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಆಂತರಿಕ ಕೋಟಾ ಜಾರಿಗೆ ತರುವ ಭಾಗವಾಗಿ 40 ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.76 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಆದರೆ ಅದಕ್ಕೆ ಪಾವತಿಸಲು ಹಣ ಎಲ್ಲಿಂದ ಬರುತ್ತದೆ? ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ವೇತನಕ್ಕೆ ಹೋಲಿಸಿದರೆ 8,000 ರಿಂದ 10,000 ಕೋಟಿ ರೂ.ಗಳಿಗಿಂತ ಹೆಚ್ಚಿನ ವೆಚ್ಚವನ್ನು ಪೂರೈಸಲು ಸರ್ಕಾರವು ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅನುದಾನಗಳ ಮೇಲೆ ಕಣ್ಣಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದರಿಂದ ರಾಜ್ಯದ ಬದ್ಧತಾ ವೆಚ್ಚವೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರಕ್ಕೆ ವಿವಿಧ ಇಲಾಖೆಗಳ ಅಡಿಯಲ್ಲಿ SC/ST ಗಳಿಗೆ ಸಬ್ಸಿಡಿಗಳನ್ನು ಕಡಿತಗೊಳಿಸಬೇಕಾಗುತ್ತದೆ, ಇಲ್ಲವೇ ಪಾವತಿ ವಿಳಂಬ ಮಾಡಬೇಕಾಗುತ್ತದೆ. ಏಕೆಂದರೆ ಇದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂದು ಹೇಳಲಾಗುತ್ತಿದೆ.

ಉದಾಹರಣೆಗೆ, ಕೈಗಾರಿಕಾ ಇಲಾಖೆ ಮಾತ್ರ SCSP/TSP ಅಡಿಯಲ್ಲಿ ಸುಮಾರು 800 ಕೋಟಿ ರೂ. ಸಬ್ಸಿಡಿ ವಿತರಿಸಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ. ಇದನ್ನೇ ಬೇರೆಡೆಗೆ ತಿರುಗಿಸಿ ನೌಕರರ ಸಂಬಳಕ್ಕಾಗಿ ಬಳಸಲಾಗುತ್ತದೆ ಎಂದು ದಲಿತ ಸಮುದಾಯದ ಕಾಂಗ್ರೆಸ್ ನಾಯಕರೊಬ್ಬರು ಆರೋಪಿಸಿದ್ದಾರೆ. ಸರ್ಕಾರವು 2025-26ರ ಬಜೆಟ್‌ನಲ್ಲಿ ಐದು ಖಾತರಿಗಳಿಗಾಗಿ ವಾರ್ಷಿಕವಾಗಿ 51,034 ಕೋಟಿ ರೂ.ಗಳನ್ನು ಮತ್ತು SCSP/TSP ಅನುದಾನಗಳಿಗಾಗಿ 42,018 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಮೂಲಗಳ ಪ್ರಕಾರ, ಆದಾಯ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಆದ್ಯತೆಯ ಆಧಾರದ ಮೇಲೆ ಸುಮಾರು 25,000 ಖಾಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಸರ್ಕಾರವು ಹಂತಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆಯಿದೆ.

ಗೃಹ ಇಲಾಖೆ ಸೇರಿದಂತೆ ಸುಮಾರು 40,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಆಶಿಸಿದ್ದಾರೆ. ಆಂತರಿಕ ಕೋಟಾ ಅನುಷ್ಠಾನಕ್ಕೆ ಆದೇಶ ಹೊರಡಿಸಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DAPR) ಇನ್ನೂ ನೇಮಕಾತಿ ಮೇಲಿನ ನಿಷೇಧವನ್ನು ತೆಗೆದುಹಾಕಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT