ಸಾಂದರ್ಬಿಕ ಚಿತ್ರ 
ರಾಜ್ಯ

ಮದ್ಯ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಆಗಸ್ಟ್ 31, ಸೆಪ್ಟಂಬರ್ 14 ರಂದು ಮದ್ಯ ಮಾರಾಟ ನಿಷೇಧ

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 31 ಹಾಗೂ ಸೆಪ್ಟಂಬರ್ 14ರಂದು ನಗರದ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಗಸ್ಟ್ 31ರ ಬೆಳಗ್ಗೆ 6ಗಂಟೆಯಿಂದ ಸೆಪ್ಟೆಂಬರ್ 1ರ ಬೆಳಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್‌ ಸ್ಟ್ರೀಟ್‌, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು, ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌ಎಂಸಿ ಯಾರ್ಡ್‌, ಜೆ.ಸಿ. ನಗರ, ಆರ್‌.ಟಿ. ನಗರ, ಹೆಬ್ಬಾಳ, ಸದಾಶಿವನಗರ, ತಲಘಟ್ಟಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇನ್ನು ಸೆಪ್ಟೆಂಬರ್ 14ರ ಬೆಳಗ್ಗೆ 6ಗಂಟೆಯಿಂದ ಸೆ.15ರ ಬೆಳಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo flights: ಮತ್ತೆ 400 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೋ ಏರ್‌ಲೈನ್ಸ್‌, ವಿಮಾನಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪ

H-1B visa ನಿಯಮದಲ್ಲಿ ಅಮೆರಿಕಾ ಮಹತ್ವದ ಬದಲಾವಣೆ: ಇನ್ನು ಮುಂದೆ ಅರ್ಜಿದಾರರ "social media" ಖಾತೆ ಪಬ್ಲಿಕ್ ಇದ್ದರಷ್ಟೇ ವೀಸಾ..!

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ

ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ: ರಾಜ್ಯ ಸರ್ಕಾರ ಘೋಷಣೆ

ವಿಶ್ವದ ಶ್ರೀಮಂತ ವ್ಯಕ್ತಿಯ ಬ್ರಿಟೀಷ್ ಕಾಲದ ಅರಮನೆ: Putin ಗೆ ಆತಿಥ್ಯ ವಹಿಸಿರುವ Hyderabad House ವಿಶೇಷತೆಗಳೇನು? ನಿರ್ಮಾಣ ಆಗಿದ್ದು ಹೇಗೆ?

SCROLL FOR NEXT