ಗಿರೀಶ್ ಮಟ್ಟಣ್ಣನವರ್ 
ರಾಜ್ಯ

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು; SIT ವಿಚಾರಣೆ ಬಳಿಕ ಹೋರಾಟಗಾರ ಗರಂ! Video

ಬುರುಡೆ ಆಗಲಿ, ಏನೇ ಆಗಲಿ ಪ್ರತಿಯೊಂದಕ್ಕೂ ಸ್ಪಷ್ಟನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.

ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ನಿನ್ನೆ ವಿಶೇಷ ತನಿಖಾ ತಂಡದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, SIT ಕಚೇರಿ ಮೆಟ್ಟಿಲು ಹತ್ತುತ್ತಿದ್ದಂತೆಯೇ ಎದೆ ಢವ ಢವ ಅಂತಾ ಬಡಿಕೊಳ್ಳಲು ಪ್ರಾರಂಭಿಸಿತು. ಜಗತ್ತಿನಲ್ಲಿ ಎಷ್ಟು ಮುಸ್ಲಿಂ, ಕ್ರಿಶ್ಚಿಯನ್ ರಾಷ್ಟ್ರಗಳಿವೆ ಅಂತಾ ಕೇಳಿದ್ರು. ನಂತರ ಯಾವ ಯಾವ ಪಾದ್ರಿ, ಮೌಲಿ, ಶೇಠ್ ಗಳಿಂದ ದೇವಸ್ಥಾನ ಹಾಳು ಮಾಡಲು ಎಷ್ಟು ದುಡ್ಡು ಕೊಟ್ಟಿದ್ದಾರೆ ಅಂತಾ ಕೇಳಿದ್ರು. ಅದನ್ನು ಪೂರ್ತಿಯಾಗಿ ಹೇಳಿದ್ದೇನೆ ಎಂದರು.

ಯಾವ ಶೋ ರೂಂ ನಿಂದ ಬುರುಡೆ ತಂದಿದ್ದೀರಿ. ಅದಕ್ಕೆ ಯಾವ ಕಾರ್ಪರೇಟರ್ ಬಣ್ಣ ಹಚ್ಚಿದ್ರು ಅಂತಾ ಕೇಳಿದ್ರು. ಅವರ ನಂಬರ್ ಕೂಡಾ ಕೊಟ್ಟಿ ಬಂದಿದ್ದೇನೆ. ಬುರುಡೆ ಆಗಲಿ, ಏನೇ ಆಗಲಿ ಪ್ರತಿಯೊಂದಕ್ಕೂ ಸ್ಪಷ್ಟನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.

ಪ್ರಕರಣದಲ್ಲಿ ನಾವು ಯಾವುದೇ ಸುಳ್ಳು ಹೇಳಿಲ್ಲ. ಎಲ್ಲದ್ದಕ್ಕೂ ಸ್ಪಷ್ಟನೆ ನೀಡಿದ್ದೇನೆ. ಹೆಣ ಹೂತಿದ್ದ ಅಕ್ರಮ ಮತ್ತು ಧರ್ಮಸ್ಥಳ ಪಂಚಾಯತ್ ದಾಖಲೆಯಲ್ಲಿನ ಫೋರ್ಜರಿ ಕುರಿತು ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿದ್ದರೆ ತಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದ್ದಾರೆ.

ಈ ವಿಡಿಯೋವನ್ನು ವಕೀಲ ಜಗದೀಶ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ SIR: ಡಿಸೆಂಬರ್ 1 ರವರೆಗೆ 21 ಲಕ್ಷಕ್ಕೂ ಹೆಚ್ಚು ಮೃತ ಮತದಾರರು ಪತ್ತೆ!

SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; ಗದ್ದಲದ ನಡುವೆ ಮಣಿಪುರ GST ಮಸೂದೆ ಅಂಗೀಕಾರ; ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಮೋದಿಯೇ 'ಅತಿದೊಡ್ಡ ಡ್ರಾಮಾಬಾಜಿ': 'ನಾಟಕ ಬೇಡ' ಎಂದ ಪ್ರಧಾನಿಗೆ ಕಾಂಗ್ರೆಸ್ ತಿರುಗೇಟು

ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ: ರೇಣುಕಾ ಚೌಧರಿ ವಿವಾದಾತ್ಮಕ ಹೇಳಿಕೆ

KIITಯ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಮೂರನೇ ಸಾವು

SCROLL FOR NEXT