ಪ್ರವೀಣಕುಮಾರ್ ಉಡಗಿ - ಸಿದ್ದರಾಮಯ್ಯ 
ರಾಜ್ಯ

ಕಲಬುರಗಿ: 'ಸಿದ್ರಾಮುಲ್ಲಾಖಾನ್' ಎಂದು ಸ್ಟೇಟಸ್ ಹಾಕಿದ PDO ವಿರುದ್ಧ ಎಫ್ಐಆರ್ ದಾಖಲು

'ಸಿದ್ರಾಮುಲ್ಲಾಖಾನ್' ಎಂದು ವಾಟ್ಸ್ ಆಪ್ ಸ್ಟೇಟಸ್‌ ಹಾಕಿದ್ದ ಪ್ರವೀಣಕುಮಾರ್ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ವಾಟ್ಸ್ ಆಪ್ ಸ್ಟೇಟಸ್ ಹಾಕಿದ ಆರೋಪದ ಮೇಲೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಪ್ರವೀಣಕುಮಾರ್ ಉಡಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

'ಸಿದ್ರಾಮುಲ್ಲಾಖಾನ್' ಎಂದು ವಾಟ್ಸ್ ಆಪ್ ಸ್ಟೇಟಸ್‌ ಹಾಕಿದ್ದ ಪ್ರವೀಣಕುಮಾರ್ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.

ಪ್ರವೀಣಕುಮಾರ್ ಅವರು ಆಗಸ್ಟ್ 21ರಂದು 'ಸಿದ್ರಾಮುಲ್ಲಾಖಾನ್' ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಸ್ಟೇಟಸ್‌ ಇಟ್ಟುಕೊಂಡಿದ್ದನ್ನು ಗಮಿನಿಸಿದ ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಅವರು ಪಿಡಿಒ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮದ ಮುಖಂಡರಾದ ಮಹಾಲಿಂಗಪ್ಪ ಹರವಾಳ, ಆಳಂದ ತಾಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣ ಪೂಜಾರಿ ಸೇರಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ GST ಬದಲಾವಣೆಯಿಂದ ರಾಜ್ಯಕ್ಕೆ15 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿ ಸೇರಿ ಎಲ್ಲಾ ಸಂಸದರನ್ನು ಸೋಲಿಸಿ; ಸಿದ್ದರಾಮಯ್ಯ

ನವಿ ಮುಂಬೈ: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ; ಆರು ವರ್ಷದ ಬಾಲಕ ಸೇರಿ- ನಾಲ್ವರ ಸಾವು

ಬಿಜೆಪಿಯವರದ್ದು ಡೋಂಗಿ ಹಿಂದುತ್ವ: ಜೆಡಿಎಸ್ ನ 'S' ಎಂದರೆ ಜಾತ್ಯಾತೀತವೋ? ಕೇಸರಿಯೋ? 19 ಸಂಸದರು ಇಂಡಿಯಾ ಗೇಟ್ ಕಾಯೋಕೆ ಇದ್ದಾರಾ?

ಮರಳು ಮಾಫಿಯಾ ವಿರುದ್ಧ ಸಿಡಿದೆದ್ದ ಸಿಎಂ ಸಲಹೆಗಾರ: ದಂಧೆಕೋರರಿಗೆ ಅಧಿಕಾರಿಗಳೇ ಸಾಥ್, ಕ್ರಮಕ್ಕೆ ಬಸವರಾಜ ರಾಯರೆಡ್ಡಿ ಆಗ್ರಹ

ನಂಬಿಕೆ ಇರುವವರಿಗೆ ಮಾತ್ರ ದೀಪಾವಳಿ ಶುಭಾಶಯ: ಮತ್ತೆ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್; ಬಿಜೆಪಿ ಕಿಡಿ

SCROLL FOR NEXT