ಗಿರೀಶ್ ಮಟ್ಟಣ್ಣನವರ್-ಚಿನ್ನಯ್ಯ-ಜಯಂಟ್ 
ರಾಜ್ಯ

ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು 'ಬುರುಡೆ' ಜೊತೆ ದೆಹಲಿಗೆ ಹೋಗಿದ್ದೇವು: ಜಯಂತ್ ಸ್ಫೋಟಕ ಹೇಳಿಕೆ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ಬುರುಡೆ ಜೊತೆ ದೆಹಲಿಗೆ ಹೋಗಿದ್ದು ನಿಜ ಎಂದು ದೂರುದಾರ ಜಯಂತ್ ಒಪ್ಪಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಪ್ರಮುಖ ಮಾಹಿತಿಯೊಂದು ಬಹಿರಂಗಪಡಿಸಿದ್ದಾರೆ. ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ಮುನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದೇವು ಎಂದು ಮಾಹಿತಿ ನೀಡಿದ್ದಾರೆ.

ಬುರುಡೆಯನ್ನು ಮೊದಲಿಗೆ ಸುಪ್ರೀಂ ಕೋರ್ಟ್ ತೆಗೆದುಕೊಂಡು ಹೋಗಲು ನಿರ್ಧರಿಸಿ ನಾವು ನಾಲ್ವರು... ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯ, ಸುಜಾತಾ ಭಟ್ ಹಾಗೂ ನಾನು ದೆಹಲಿಗೆ ಕಾರಿನಲ್ಲಿ ಹೋಗಿದ್ದೇವು. ಆದರೆ ಅಲ್ಲಿ ನಮ್ಮ ಯೋಜನೆ ಸಫಲವಾಗದ ಕಾರಣ ಬುರುಡೆಯನ್ನು ವಾಪಸ್ ತರಲಾಯಿತು ಎಂದು ಜಯಂತ್ ಹೇಳಿದ್ದಾರೆ.

ಬೆಂಗಳೂರಿನ ನನ್ನ ಮನೆಯಲ್ಲಿ ಚಿನ್ನಯ್ಯ ಮೂರು ದಿನ ಇದ್ದ. ಆತನಿಗೆ ಊಟ ಹಾಕಿದ್ದೇನೆ. ಬೆಂಗಳೂರಿನಲ್ಲಿ ನನ್ನ ಮಗ, ಮಗಳಿದ್ದಾರೆ. ಅವರನ್ನೇ ಕೇಳಿ ಸಂಪೂರ್ಣ ಮಾಹಿತಿ ನೀಡುತ್ತಾರೆ ಎಂದು ಜಯಂತ್ ಹೇಳಿದ್ದಾರೆ.

ಇದೇ ವೇಳೆ ಎಸ್ಐಟಿ ಅಧಿಕಾರಿಗಳು ಜಯಂತ್ ಮನೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಮನೆಯ ಇಂಚಿಂಚೂ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಮನೆಯಲ್ಲಿ ಫೋಟೋ ನೆಗೆಟಿವ್ಸ್ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

H-1B visa ನಿಯಮದಲ್ಲಿ ಅಮೆರಿಕಾ ಮಹತ್ವದ ಬದಲಾವಣೆ: ಇನ್ನು ಮುಂದೆ ಅರ್ಜಿದಾರರ "social media" ಖಾತೆ ಪಬ್ಲಿಕ್ ಇದ್ದರಷ್ಟೇ ವೀಸಾ..!

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ

ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ: ರಾಜ್ಯ ಸರ್ಕಾರ ಘೋಷಣೆ

ರಷ್ಯಾ ಅಧ್ಯಕ್ಷ Putin ಗೆ ಮೋದಿ ನಿವಾಸದಲ್ಲಿ ವಿಶೇಷ ಭೋಜನ ಕೂಟ!

ಇನ್ನೂ 2-3 ದಿನ ಅವಾಂತರ; ಫೆ. 10 ರವರೆಗೆ ನಿಯಮಗಳ ವಿನಾಯಿತಿ ಕೋರಿದ IndiGo!

SCROLL FOR NEXT