ವಿಷ್ಣು ವರ್ಧನ್ ಪುಣ್ಯ ಭೂಮಿ ಸ್ಥಳ 
ರಾಜ್ಯ

ಅಭಿಮಾನ್ ಸ್ಟುಡಿಯೋ: ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ; ಸಚಿವ ಈಶ್ವರ ಖಂಡ್ರೆ ಹೇಳಿದ್ದು ಏನು?

ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು.

ಬೀದರ್: ದಿವಂಗತ ನಟ ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಸ್ಮಾರಕವನ್ನು ತೆರವು ಮಾಡುವ ಮೂಲಕ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ನಟ ಬಾಲಕೃಷ್ಣ ಕುಟುಂಬಕ್ಕೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಭಿಮಾನ್ ಸ್ಟುಡಿಯೋಗಾಗಿ ನೀಡಿದ್ದ ಜಾಗವನ್ನು ಅರಣ್ಯ ಭೂಮಿ ಎಂದು ಘೋಷಣೆ ಮಾಡಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಇಲ್ಲಿ 10 ಎಕರೆ ಅರಣ್ಯ ಭೂಮಿಯಿದ್ದು ಇದನ್ನು ಮರಳಿ ಪಡೆಯಲು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಮರಳಿ ಸರ್ಕಾರಕ್ಕೆ ಪಡೆಯುವ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಚ್.ಎಂ.ಟಿ. ವಶದಲ್ಲಿರುವುದು ಅರಣ್ಯ ಭೂಮಿ ಎಂದು ತಮಗೆ ತಿಳಿದ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ. ಅದೇ ರೀತಿ ಯಾವುದು ಅರಣ್ಯ ಭೂಮಿಯೋ ಅದು ಅರಣ್ಯವಾಗಿ ಉಳಿಯತ್ತೆ ಎಂದರು.

ಮೇರುನಟ ದಿವಂಗತ ವಿಷ್ಣುವರ್ಧನ್ ಅವರ ಬಗ್ಗೆ ಅಪಾರ ಗೌರವ ಇದೆ. ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ನೀಡುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡುತ್ತಾರೆ ಎಂದು ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್