ಪ್ರಮೋದಾ ದೇವಿ 
ರಾಜ್ಯ

ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ; ನಮ್ಮ ದಸರಾ ಖಾಸಗಿಯಾಗಿ ನಡೆಯುತ್ತೆ: ಪ್ರಮೋದಾ ದೇವಿ

ಚಾಮುಂಡಿ ಯದುವಂಶದ ಮನೆ ದೇವರು. ನಮ್ಮ ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆಯೇ ಪೂಜೆ ನಡೆಯುತ್ತದೆ ಎಂದರು.

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡೇಶ್ವರಿ ಹಿಂದೂ ದೇವರು. ಹೀಗಿದ್ದರೂ ದೇವಾಲಯವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ಬೇಸರವಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿ ಯದುವಂಶದ ಮನೆ ದೇವರು. ನಮ್ಮ ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆಯೇ ಪೂಜೆ ನಡೆಯುತ್ತದೆ ಎಂದರು. ರಾಜಕಾರಣಿಗಳು ಏನು ಬೇಕಾದರೂ ಹೇಳಲಿ. ಏನೆಂದು ಬೇಕಾದರೂ ಕರೆಯಲಿ. ಅವರು ಹೇಳಿದಂತೆಲ್ಲಾ ಆಗುವುದಿಲ್ಲ ಎಂದರು.

ನಮ್ಮ ಮನೆತನ ಹಾಗೂ ದೇವಸ್ಥಾನದ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇವೆ. ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಸಂಬಂಧಿಸಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರೂ ಅದು ಅಧಿಕೃತವಲ್ಲ.

ನ್ಯಾಯಾಲಯದ ಆದೇಶ ಬಂದ ಮೇಲಷ್ಟೆ ಎಲ್ಲವೂ ಸ್ಪಷ್ಟ ಆಗುತ್ತದೆ ಎಂದು ಹೇಳಿದರು. 70 ವರ್ಷಗಳಿಂದ ಈ ಹೋರಾಟ ನಡೆದಿದ್ದು, ಎಲ್ಲವೂ ನ್ಯಾಯಾಲಯದಲ್ಲಿದೆ ಎಂದರು.

ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯವೇನೂ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೇ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರದವರು ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಾರೆ.

ಅದಕ್ಕೂ-ನಮಗೂ ಸಂಬಂಧ ಇಲ್ಲ ಎಂದರು. ವಿಜಯದಶಮಿಯಂದು ದಿನ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಮೆರವಣಿಗೆಗೆ ಹೋಗುವುದಿಲ್ಲ. ನಮ್ಮ ಮನೆಯಿಂದ ಒಬ್ಬರು ಹೋಗುತ್ತಾರಷ್ಟೆ ಎಂದು ಪ್ರತಿಕ್ರಿಯಿಸಿದರು. ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರವನ್ನು ಮುಂದುವರಿಸುವುದು ಬೇಡ ಎಂದು‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT