ಬಾಲ್ಯ ವಿವಾಹ-ಪೋಕ್ಸೋ ಪ್ರಕರಣ ದಾಖಲು 
ರಾಜ್ಯ

Belagavi: 15 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಮದುವೆ; ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ POCSO ಪ್ರಕರಣ ದಾಖಲು!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸ್ಸಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಶಿ ಕಾಳಿಮನಿ ಎಂಬಾತನ ವಿರುದ್ಧ 15 ವರ್ಷದ ಬಾಲಕಿಯನ್ನು ವಿವಾಹವಾದ ಆರೋಪ ಹೊರಿಸಲಾಗಿದೆ.

ಬೆಳಗಾವಿ: 15 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಮದುವೆಯಾದ ಆರೋಪದ ಮೇರೆಗೆ ಬೆಳಗಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ POCSO ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸ್ಸಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಶಿ ಕಾಳಿಮನಿ ಎಂಬಾತನ ವಿರುದ್ಧ 15 ವರ್ಷದ ಬಾಲಕಿಯನ್ನು ವಿವಾಹವಾದ ಆರೋಪ ಹೊರಿಸಲಾಗಿದೆ. ನವೆಂಬರ್ 2023 ರಲ್ಲಿ ನಡೆದ ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ಕಾಳಿಮಣಿ ನವೆಂಬರ್ 5, 2023 ರಂದು ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದ. ಈಗ್ಗೆ ಹುಡುಗಿ ಐದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ. ಆರೋಪಗಳು ದೃಢಪಟ್ಟ ನಂತರ, ಪೊಲೀಸರು ಕಾಳಿಮಣಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಎಫ್‌ಐಆರ್ ದಾಖಲಿಸಿ ಹುಡುಗಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿತ್ತು. ಜಿಲ್ಲಾಧಿಕಾರಿ, ಮಕ್ಕಳ ರಕ್ಷಣಾ ಅಧಿಕಾರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಈ ಸೂಚನೆಗಳನ್ನು ನೀಡಲಾಗಿದ್ದರೂ, ಇಲ್ಲಿಯವರೆಗೆ ಯಾವುದೇ ಮಹತ್ವದ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗಿದೆ.

ಬಂಧನ ತಪ್ಪಿಸಿಕೊಳ್ಳಲು ಮಂತ್ರಿಗಳ ಹೆಸರು ಉಲ್ಲೇಖ

ಇದೇ ವೇಳೆ ಆರೋಪಿ ಕಾಳಿಮಣಿ ಬಂಧನದಿಂದ ತಪ್ಪಿಸಿಕೊಳ್ಳಲು ಇಬ್ಬರು ಕ್ಯಾಬಿನೆಟ್ ಸಚಿವರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಪೊಲೀಸ್ ಕ್ರಮಕ್ಕೆ ಹೆದರಿ ಆತ ತಲೆಮರೆಸಿಕೊಂಡಿದ್ದ. ದೂರಿನ ನಂತರ ಮಕ್ಕಳ ರಕ್ಷಣಾ ತಂಡಗಳು ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಬಾರಿ ಭೇಟಿ ನೀಡಿದರೂ ಆತನನ್ನು ಬಂಧಿಸುವಲ್ಲಿ ವಿಫಲವಾಗಿವೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಯ ಪ್ರಸಿದ್ಧ ಮಹಿಳಾ ಕಾರ್ಯಕರ್ತೆಯೊಬ್ಬರು ಆರೋಪಿಯನ್ನು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದವನಾಗಿರುವುದರಿಂದ ಆತನನ್ನು ಯಾವುದೇ ಶಿಕ್ಷೆಯಿಲ್ಲದೆ ಬಿಡಲಾಗಿದೆ ಎಂದು ಆರೋಪಿಸಿದ್ದಾರೆ. ಆತ ಮಾಡಿದ ಗಂಭೀರ ಅಪರಾಧದ ಬಗ್ಗೆ ತಿಳಿದಿದ್ದರೂ ಜಿಲ್ಲೆಯ ಯಾವ ನಾಯಕರು ಆತನನ್ನು ರಕ್ಷಿಸುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಗಣನೀಯ ಇಳಿಕೆ: ಹವಾಮಾನ ಇಲಾಖೆ

ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak

Ali'money' ಇಲ್ಲ, ಅತಿಯಾದ ಹಸ್ತಕ್ಷೇಪ ಬೇಡ': ನಟಿ ಮೌನಿ ರಾಯ್ ಜೊತೆಗಿನ ವಿಚ್ಛೇದನ ಘೋಷಣೆ ಬೆನ್ನಲ್ಲೇ ಮೌನ ಮುರಿದ Suraj Nambiar

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?; ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!

ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ., ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು

SCROLL FOR NEXT