ವಸುಧಾ ಚಕ್ರವರ್ತಿ 
ರಾಜ್ಯ

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ 45 ವರ್ಷದ ವಸುಧಾ ಚಕ್ರವರ್ತಿ ಉಡುಪಿಯ ಕೊಲ್ಲೂರಿಗೆ ತೆರಳಿದ್ದರು.

ಉಡುಪಿ: ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ 45 ವರ್ಷದ ವಸುಧಾ ಚಕ್ರವರ್ತಿ (Vasudha Chakravarthy) ಉಡುಪಿಯ (Udupi) ಕೊಲ್ಲೂರಿಗೆ ತೆರಳಿದ್ದರು. ಕೊಲ್ಲೂರಿನ ವಸತಿಗೃಹವೊಂದರ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ವಸುಧಾ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 27ರಂದು ಕಾರಿನಲ್ಲಿ ಕೊಲ್ಲೂರಿಗೆ ಬಂದಿದ್ದರು. ಇನ್ನು ಕರೆ ಮಾಡಿದಾಗ ಮಗಳು ಕರೆ ಸ್ವೀಕರಿಸಲಿಲ್ಲ ಎಂದು ಆಕೆಯ ತಾಯಿ ಆ. 29ರಂದು ಕೊಲ್ಲೂರಿಗೆ ಬಂದು ದೇವಸ್ಥಾನದ ಸಿಬ್ಬಂದಿಗೆ ವಿಚಾರ ತಿಳಿಸಿದ್ದರು.

ವಸತಿ ಗೃಹದ ಬಳಿ ಅವರ ಕಾರು ಪತ್ತೆಯಾಗಿತ್ತು. ಹೀಗಾಗಿ ಕೊಲ್ಲೂರು ಠಾಣೆಯಲ್ಲಿ ಮಹಿಳೆ ನಾಪತ್ತೆ ಕುರಿತು ಪ್ರಕರಣ ದಾಖಲಿಸಿಕೊಂಡು ಸೌಪರ್ಣಿಕಾ ನದಿ ಪರಿಸರದಲ್ಲಿ ಹುಡುಕಾಟ ನಡೆಸಲಾಗಿತ್ತು. ಇದೀಗ ಎರಡು ದಿನಗಳ ಬಳಿಕ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಶವ ಪತ್ತೆಯಾಗಿದೆ. ವಸುಧಾ ಅವರು ಈಜು ಪಟುವಾಗಿದ್ದು ವೇಗವಾಗಿ ಹರಿಯುತ್ತಿದ್ದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದರೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ತಿಳಿದುಬಂದಿಲ್ಲ. ಸ್ಥಳೀಯರು ನದಿಗೆ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು ; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್‌

Bengaluru stampede: 'ಅತ್ಯಂತ ಸಂತೋಷದ ಕ್ಷಣ ದುರಂತವಾಗಿ ಮಾರ್ಪಟ್ಟಿತು'; ಮೌನ ಮುರಿದ ವಿರಾಟ್ ಕೊಹ್ಲಿ

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

SCROLL FOR NEXT