ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜ್ಯ

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ ಕುಮಾರಸ್ವಾಮಿ ಒತ್ತಾಯ!

"ಸಮಾಜದಲ್ಲಿ ಹಿಂಸೆ, ಕಾನೂನುಬಾಹಿರ ಕೃತ್ಯಗಳು ಮತ್ತು ಅಶಾಂತಿ ದೈನಂದಿನ ವ್ಯವಹಾರವಾಗಿ ಮಾರ್ಪಟ್ಟಿರುವುದರಿಂದ ಮಕ್ಕಳಿಗೆ ಭಗವದ್ಗೀತೆ ಕಲಿಸುವುದು ಇಂದಿನ ಅಗತ್ಯವಾಗಿದೆ.

ಶಿವಮೊಗ್ಗ: ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ನಡೆದ ಭಗವದ್ಗೀತಾ ಅಭಿಯಾನ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭಗವದ್ಗೀತೆಯನ್ನು ಪಠ್ಯಪುಸ್ತಕಗಳಲ್ಲಿ ಸೇರಿಸುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.ತದ ನಂತರ ಮಾತನಾಡಿದ ಕುಮಾರಸ್ವಾಮಿ, ಮುಂದಿನ ದಿನಗಳಲ್ಲಿ ಕ್ರಮಗಳನ್ನು ಪ್ರಾರಂಭಿಸುವುದಾಗಿ ಭರವಸೆ ನೀಡಿದರು.

ಶಾಲಾ ಮಕ್ಕಳಿಗೆ ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡಲು ರಾಮಾಯಣ ಮತ್ತು ಮಹಾಭಾರತವನ್ನು ಕಲಿಸಬೇಕು. "ಸಮಾಜದಲ್ಲಿ ಹಿಂಸೆ, ಕಾನೂನುಬಾಹಿರ ಕೃತ್ಯಗಳು ಮತ್ತು ಅಶಾಂತಿ ದೈನಂದಿನ ವ್ಯವಹಾರವಾಗಿ ಮಾರ್ಪಟ್ಟಿರುವುದರಿಂದ ಮಕ್ಕಳಿಗೆ ಭಗವದ್ಗೀತೆ ಕಲಿಸುವುದು ಇಂದಿನ ಅಗತ್ಯವಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡಲು ಭಗವದ್ಗೀತೆ ಈ ಪೀಳಿಗೆಗೆ ಮಾರ್ಗದರ್ಶನದ ಬೆಳಕಾಗಿದೆ. ಪ್ರತಿಯೊಬ್ಬರೂ ಭಗವದ್ಗೀತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಭಗವದ್ಗೀತೆ ಭಾರತದಲ್ಲಿ ಹುಟ್ಟಿಕೊಂಡಿತು ಎಂಬುದು ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುವ ವಿಷಯವಾಗಿದೆ.ಭಗವದ್ಗೀತೆಯ ಮೌಲ್ಯಗಳನ್ನು ಕಲಿಯಲು ಮತ್ತು ಅಳವಡಿಸಿಕೊಳ್ಳಲು ಎಲ್ಲರಿಗೂ ವೇದಿಕೆ ಒದಗಿಸುವುದರಿಂದ ಭಗವದ್ಗೀತೆ ಅಭಿಯಾನವನ್ನು ರಾಷ್ಟ್ರದಾದ್ಯಂತ ವಿಸ್ತರಿಸಬೇಕು ಎಂದು ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ತಿಳಿಸಿದರು.

ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಪೀಠಾಧಿಪತಿ ಗಂಗಾಧರೇಂದ್ರ ಸರಸ್ವತಿ, ಭಗವದ್ಗೀತೆಯನ್ನು ಚಿಕ್ಕ ವಯಸ್ಸಿನಲ್ಲಿಯೇ ಕಲಿಸಿದಾಗ, ಅದು ಅಪರಾಧ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.ಕೋಮು ಸೌಹಾರ್ದತೆಯನ್ನು ನಿರ್ಮಿಸುವುದು ಈ ಅಭಿಯಾನದ ಪ್ರಮುಖ ಧ್ಯೇಯವಾಗಿದೆ. ಇದು ರಾಷ್ಟ್ರೀಯ ಸಮಗ್ರತೆಯನ್ನು ತರುತ್ತದೆ ಮತ್ತು ದೇಶದ ವಿದ್ಯಾವಂತ ಯುವಕರಿಗೆ ಮಾರ್ಗದರ್ಶಕ ಬೆಳಕಾಗಿದೆ. ಭಗವದ್ಗೀತೆಯನ್ನು ಕಲಿಸುವ ಮಕ್ಕಳು ರಾಷ್ಟ್ರಕ್ಕೆ ಮಾರ್ಗದರ್ಶಕ ದೀಪಗಳಂತೆ ಇರುತ್ತಾರೆ ಎಂದರು.

ಜೀವನದ ಮೌಲ್ಯಗಳನ್ನು ತಿಳಿಯಲು ಭಗವದ್ಗೀತೆಯನ್ನು ಅಧ್ಯಯನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇದು ಜೀವನದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ. ಸಮಸ್ಯೆಗಳಿಗೆ ಎದುರಿ ಓಡಿಹೋಗಬಾರದು, ಧೈರ್ಯ, ಆತ್ಮವಿಶ್ವಾಸ ಮತ್ತು ಶಕ್ತಿಯಿಂದ ಅವುಗಳನ್ನು ಎದುರಿಸಬೇಕು ಎಂಬುದನ್ನು ಇದು ಕಲಿಸುತ್ತದೆ. ಆರೋಗ್ಯಕರ ಸಮಾಜಕ್ಕಾಗಿ, ಭಗವದ್ಗೀತೆ ಬಹಳ ಅವಶ್ಯಕವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!