ಆರ್ ವಿ ದೇವರಾಜ್ (ಸಂಗ್ರಹ ಚಿತ್ರ) 
ರಾಜ್ಯ

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯೆ ಆರ್ ವಿ ದೇವರಾಜ್ ಗೆ ಆಗಿದ್ದೇನು?

ಹೃದಯಾಘಾತ ಆಗುತ್ತಿದ್ದಂತೆ ಮೊದಲಿಗೆ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿಕತ್ಸೆಗಾಗಿ ಅಲ್ಲಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಚಾಮುಂಡಿ ತಾಯಿ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ.

67 ವರ್ಷದ ಆರ್‌ವಿ ದೇವರಾಜ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದರು. ಇದೇ ಡಿಸೆಂಬರ್ 3ರಂದು ಅವರ ಹುಟ್ಟುಹಬ್ಬವಿತ್ತು. ಹೀಗಾಗಿ ಇಂದು ಚಾಮುಂಡೇಶ್ವರಿ ದರ್ಶನಕ್ಕಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಈ ವೇಳೆ ಸಂಜೆ 7 ಗಂಟೆ ಸುಮಾರಿನಲ್ಲಿ ಮೈಸೂರಿನಲ್ಲಿ ಆರ್‌ವಿ ದೇವರಾಜ್‌ಗೆ ಹೃದಯಾಘಾತ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೃದಯಾಘಾತ ಆಗುತ್ತಿದ್ದಂತೆ ಮೊದಲಿಗೆ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿಕತ್ಸೆಗಾಗಿ ಅಲ್ಲಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರ್‌ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಅವರ ಪಾರ್ಥಿವ ಶರೀರ ಜಯದೇವ ಆಸ್ಪತ್ರೆಯಲ್ಲೇ ಇದ್ದು, ನಾಳೆ ಬೆಂಗಳೂರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಮಾಜಿ ಸಿಎಂ ಎಸ್ ಎಂ ಕೃಷ್ಣಾಗೆ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದ ಆರ್ ವಿ ದೇವರಾಜ್!

ಆಹಾರ ಸುರಕ್ಷತೆ, ಮಾನನಷ್ಟ ಆರೋಪ: ರಾಮೇಶ್ವರಂ ಕೆಫೆ ವಿರುದ್ಧ FIR ದಾಖಲು, ಕೋಲು ಕೊಟ್ಟು ಹೊಡೆಸಿಕೊಂಡ ಮಾಲೀಕರು?

ಆರ್ ವಿ ದೇವರಾಜ್ ನಿಧನಕ್ಕೆ ಗಣ್ಯರ ಸಂತಾಪ

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ

SCROLL FOR NEXT