ಸಾಂದರ್ಭಿಕ ಚಿತ್ರ 
ರಾಜ್ಯ

ಮಾಗಡಿ-ಮೈಸೂರು ರಸ್ತೆ ಸಂಪರ್ಕಿಸುವ ಮೂರು ಪಥಗಳ ರಸ್ತೆ: ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಮುಕ್ತ?

ಬಾಕ್ಸ್-ಪುಶ್ ತಂತ್ರಜ್ಞಾನವನ್ನು ಬಳಸಿಕೊಂಡು ನಾಡಪ್ರಭು ಕೆಂಪೇಗೌಡ ಲೇಔಟ್ ಅನ್ನು ಸಂಪರ್ಕಿಸುವ ಅಂಡರ್‌ಪಾಸ್ ನಿರ್ಮಾಣವಾಗುತ್ತಿದ್ದು, ಉಕ್ಕಿನ ಗಿರ್ಡರ್ ಅಳವಡಿಸುವ ಕಾಮಗಾರಿ ಮುಗಿದಿದೆ.

ಬೆಂಗಳೂರು: ಮಾಗಡಿ ರಸ್ತೆಯನ್ನು ಮೈಸೂರು ರಸ್ತೆಗೆ ಸಂಪರ್ಕಿಸುವ ಆರು ಪಥಗಳ ಮೇಜರ್ ಆರ್ಟೀರಿಯಲ್ ರಸ್ತೆ (MAR) ಕಾಮಗಾರಿ ವೇಗ ಪಡೆದುಕೊಂಡಿದ್ದು, ಜನವರಿಯಲ್ಲಿ ಮೂರು ಪಥಗಳು ಸಾರ್ವಜನಿಕರಿಗೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧಿಕಾರಿಗಳು ತಿಳಿಸಿದ್ದಾರೆ.

ಬಾಕ್ಸ್-ಪುಶ್ ತಂತ್ರಜ್ಞಾನವನ್ನು ಬಳಸಿಕೊಂಡು ನಾಡಪ್ರಭು ಕೆಂಪೇಗೌಡ ಲೇಔಟ್ ಅನ್ನು ಸಂಪರ್ಕಿಸುವ ಅಂಡರ್‌ಪಾಸ್ ನಿರ್ಮಾಣವಾಗುತ್ತಿದ್ದು, ಉಕ್ಕಿನ ಗಿರ್ಡರ್ ಅಳವಡಿಸುವ ಕಾಮಗಾರಿ ಮುಗಿದಿದೆ. ಸ್ಟೀಲ್ ಗಿರ್ಡರ್‌ಗಳ ಅಳವಡಿಕೆ ಮುಗಿದ ನಂತರ ರಸ್ತೆ ಕಾಮಗಾರಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರಿಂದಾಗಿ ಹಳಿಯಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಗಿತ್ತು. ಬೆಂಗಳೂರು ಮತ್ತು ಮೈಸೂರು ನಡುವೆ ಚಲಿಸುವ ಎರಡು ಹಳಿಗಳಲ್ಲಿ ಒಂದರ ಕೆಳಗೆ ಗಿರ್ಡರ್ ಅಳವಡಿಕೆಯೊಂದಿಗೆ ರೈಲುಗಳು ಈಗ ಸುರಕ್ಷಿತವಾಗಿ ಮೇಲೆ ಚಲಿಸಬಹುದಾಗಿದೆ. ಆದರೆ ಕೆಳಗೆ ರಸ್ತೆ ಅಗೆಯುವಿಕೆ ಮತ್ತು ನಿರ್ಮಾಣ ಮುಂದುವರಿಯುತ್ತದೆ.

ಎರಡೂ ರೈಲ್ವೆ ಹಳಿಗಳಲ್ಲಿ ಉಕ್ಕಿನ ಗಿರ್ಡರ್‌ ಅಳವಡಿಸಿದ ನಂತರ, ಬಿಡಿಎ ಬಾಕ್ಸ್-ಪುಶ್ ತಂತ್ರಜ್ಞಾನ ಪ್ರಕ್ರಿಯೆಯನ್ನು ಆರಂಭಿಸಲಿದೆ. MAR ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್‌ಪಾಸ್ ನಿರ್ಮಿಸಲು ಕಾಂಕ್ರೀಟ್ ಬಾಕ್ಸ್ ಗಳನ್ನು ರೈಲ್ವೆ ಮಾರ್ಗದ ಕೆಳಗೆ ಇರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಗಿರ್ಡರ್ ಅಳವಡಿಕೆ ಮತ್ತು ಬಾಕ್ಸ್-ಪುಶ್ ಕಾಮಗಾರಿ ಚುರುಕಾಗಿ ನಡೆದರೆ ಮೊದಲ ಮೂರು ಲೇನ್‌ಗಳು ಜನವರಿಯಲ್ಲಿ ಸಾರ್ವಜನಿಕರಿಗೆ ಮುಕ್ತವಾಗುವ ಸಾಧ್ಯತೆಯಿದೆ ಎಂದು ಯೋಜನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂಡರ್‌ಪಾಸ್ ಪೂರ್ಣಗೊಂಡ ನಂತರ, ಕಾರಿಡಾರ್ ಅನ್ನು ಸಿಗ್ನಲ್ ಮುಕ್ತವಾಗಿಸಲು ಕ್ಲೋವರ್‌ಲೀಫ್ ಇಂಟರ್‌ಚೇಂಜ್ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಭಾಗವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೆತ್ತಿಕೊಳ್ಳುತ್ತದೆ. ಯೋಜನೆ ಪೂರ್ಣಗೊಂಡ ಬಳಿಕ ಈ ರಸ್ತೆ ದಕ್ಷಿಣ ಮತ್ತು ಪಶ್ಚಿಮ ಬೆಂಗಳೂರು ನಡುವಿನ ಪ್ರಯಾಣದ ಅವಧಿಯನ್ನು 60 ನಿಮಿಷಗಳಿಂದ 10 ನಿಮಿಷಗಳಿಗೆ ಕಡಿಮೆ ಮಾಡುವ ನಿರೀಕ್ಷೆಯಿದೆ. ಈ ಯೋಜನೆ ನವೆಂಬರ್ ತಿಂಗಳೊಳಗೆ ಮುಗಿಸಲು ಗಡುವು ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT