ಸಂಗ್ರಹ ಚಿತ್ರ 
ರಾಜ್ಯ

ಗೀಸರ್‌ ಗ್ಯಾಸ್‌ ಸೋರಿಕೆ: ಸ್ನಾನಕ್ಕೆಂದು ಹೋಗಿದ್ದ ಗೃಹಿಣಿ ಬಾತ್‌ರೂಮ್‌ನಲ್ಲೇ ಸಾವು

ಕೃಷ್ಣಮೂರ್ತಿ ನವೆಂಬರ್ 29 ರಂದು ಬೆಳಿಗ್ಗೆ ಕಚೇರಿಗೆ ಹೋಗಿದ್ದರು. ಈ ನಡುವೆ ಪತ್ನಿ ಭೂಮಿಕಾ ಸ್ನಾನದ ಗೃಹಕ್ಕೆ ಹೋಗಿದ್ದು, ಗ್ಯಾಸ್ ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ ಉಂಟಾಗಿ ವಿಷಕಾರಿ ಹೊಗೆ ಬಂದಿದೆ.

ಬೆಂಗಳೂರು: ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿದ್ದ ಗೃಹಿಣಿಯೊಬ್ಬರು ಅಲ್ಲಿಯೇ ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದಗುಡ್ಡದಹಳ್ಳಿಯಲ್ಲಿ ಶನಿವಾರ ನಡೆದಿದೆ.

ಮೃತಳನ್ನು ಹಾಸನದ ಭೂಮಿಕಾ (24) ಎಂದು ಗುರ್ತಿಸಲಾಗಿದೆ. ನಾಲ್ಕು ತಿಂಗಳ ಹಿಂದೆ ಪೀಣ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಕೃಷ್ಣಮೂರ್ತಿ ಅವರೊಂದಿಗೆ ವಿವಾಹವಾಗದಿದ್ದರು. ಕಳೆದ 15 ದಿನಗಳಿಂದ ತೋಟದಗುಡ್ಡದಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಪತಿಯೊಂದಿಗೆ ವಾಸವಿದ್ದರು.

ಕೃಷ್ಣಮೂರ್ತಿ ನವೆಂಬರ್ 29 ರಂದು ಬೆಳಿಗ್ಗೆ ಕಚೇರಿಗೆ ಹೋಗಿದ್ದರು. ಈ ನಡುವೆ ಪತ್ನಿ ಭೂಮಿಕಾ ಸ್ನಾನದ ಗೃಹಕ್ಕೆ ಹೋಗಿದ್ದು, ಗ್ಯಾಸ್ ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ ಉಂಟಾಗಿ ವಿಷಕಾರಿ ಹೊಗೆ ಬಂದಿದೆ. ಈ ವಿಷಕಾರಿ ಹೊಗೆಯನ್ನು ಉಸಿರಾಡಿದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ನಡುವೆ ಪತಿ ಕೃಷ್ಣಮೂರ್ತಿ ಸಂಜೆ ಮನೆಗೆ ಹಿಂತಿರುಗಿದಾಗ ಪದೇ ಪದೇ ಬಾಗಿಲು ಬಡಿದರೂ ಮತ್ತು ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ನೀಡಿಲ್ಲ. ನಂತರ ಬಾಗಿಲು ಒಡೆದು ನೋಡಿದಾಗ ಪತ್ನಿ, ಸ್ನಾನಗೃಹದಲ್ಲಿ ಬಿದ್ದಿರುವುದು ಕಂಡುಬಂದಿದೆ. ಈ ಸಂಬಂಧ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್; ಖುದ್ದು ಪಾಲಂ ಏರ್​​ಪೋರ್ಟ್​​ಗೆ ತೆರಳಿ ಸ್ವಾಗತಿಸಿದ ಪ್ರಧಾನಿ ಮೋದಿ

'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ.. ಸಮಸ್ಯೆ ಬಗೆಹರಿಸಲು ಪ್ರಯತ್ನ': IndiGo ಸಿಇಒ ವಿಷಾದ

ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ

News headlines 04-12-2025| ದರ್ಶನ್ ಇರುವ ಸೆಲ್ ಗೆ ಟಿವಿ ಭಾಗ್ಯ!; ಮಂಡ್ಯ: ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು; ಜಾನುವಾರು ಹತ್ಯೆ ಪ್ರತಿಬಂಧಕ ಸೇರಿ 8 ವಿಧೇಯಕಕ್ಕೆ ಸಂಪುಟ ಅನುಮೋದನೆ; 2ನೇ ಪೋಕ್ಸೋ ಪ್ರಕರಣದಲ್ಲೂ ಮುರುಘಾ ಶ್ರೀ ಖುಲಾಸೆ

ಎಸ್‌ಐಆರ್ ಕರ್ತವ್ಯಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ; ಒತ್ತಡ ಕಡಿಮೆ ಮಾಡಲು ಆದೇಶ

SCROLL FOR NEXT