ಕಲಬುರಗಿ-ಬೆಂಗಳೂರು (ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್) ವಂದೇ ಭಾರತ್ ರೈಲು  
ರಾಜ್ಯ

ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯ ಬದಲಾವಣೆ; ಪುಟ್ಟಪರ್ತಿಯಲ್ಲಿ ನಿಲುಗಡೆ

ಜನವರಿ 1 ರಿಂದ ಅನ್ವಯವಾಗುವಂತೆ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯವನ್ನು ಬದಲಾಯಿಸಲಾಗಿದೆ.

ಕಲಬುರಗಿ: ಕಲ್ಯಾಣ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ವಂದೇ ಭಾರತ್ ರೈಲಿನ ಸಂಚಾರದ ಸಮಯ ಬದಲಾವಣೆಗೆ ರೈಲ್ವೆ ಇಲಾಖೆ ಈಡೇರಿಸಿದೆ.

ಜನವರಿ 1 ರಿಂದ ಅನ್ವಯವಾಗುವಂತೆ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯವನ್ನು ಬದಲಾಯಿಸಲಾಗಿದ್ದು, ಕಲಬುರಗಿಯಿಂದ ಬೆಳಗ್ಗೆ 5:15 ರ ಬದಲು ಬೆಳಗ್ಗೆ 06:10 ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 02:10ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಇನ್ನು ಬೆಂಗಳೂರಿನಿಂದ ಕಲಬುರಗಿಗೆ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ಇದೀಗ ಈ ರೈಲು ಕಲಬುರಗಿಗೆ ಮೊದಲಿಗಿಂತ 45 ನಿಮಿಷ ಬೇಗ ಅಂದರೆ ರಾತ್ರಿ 11:30 ಗಂಟೆಗೆ ಬದಲಾಗಿ ರಾತ್ರಿ 10:45 ಕ್ಕೆ ತಲುಪಲಿದೆ. ಒಟ್ಟಾರೆ ಪ್ರಯಾಣದ ಸಮಯ ಇದೀಗ 8 ಗಂಟೆಯಲ್ಲಿ ಪೂರ್ಣಗೊಳ್ಳಲಿದೆ.

ಪ್ರಯಾಣಿಕರ ಕೋರಿಗೆ ಮೇರೆಗೆ ವಂದೇ ಭಾರತ್ ರೈಲು ಇನ್ಮುಂದೆ ಪುಟ್ಟಪರ್ತಿ ಸತ್ಯಸಾಯಿ ಪ್ರಶಾಂತಿ ನಿಲಯಂನಲ್ಲಿ ನಿಲುಗಡೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT