ಕಲಬುರಗಿ-ಬೆಂಗಳೂರು (ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್) ವಂದೇ ಭಾರತ್ ರೈಲು  
ರಾಜ್ಯ

ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯ ಬದಲಾವಣೆ; ಪುಟ್ಟಪರ್ತಿಯಲ್ಲಿ ನಿಲುಗಡೆ

ಜನವರಿ 1 ರಿಂದ ಅನ್ವಯವಾಗುವಂತೆ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯವನ್ನು ಬದಲಾಯಿಸಲಾಗಿದೆ.

ಕಲಬುರಗಿ: ಕಲ್ಯಾಣ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ವಂದೇ ಭಾರತ್ ರೈಲಿನ ಸಂಚಾರದ ಸಮಯ ಬದಲಾವಣೆಗೆ ರೈಲ್ವೆ ಇಲಾಖೆ ಈಡೇರಿಸಿದೆ.

ಜನವರಿ 1 ರಿಂದ ಅನ್ವಯವಾಗುವಂತೆ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯವನ್ನು ಬದಲಾಯಿಸಲಾಗಿದ್ದು, ಕಲಬುರಗಿಯಿಂದ ಬೆಳಗ್ಗೆ 5:15 ರ ಬದಲು ಬೆಳಗ್ಗೆ 06:10 ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 02:10ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಇನ್ನು ಬೆಂಗಳೂರಿನಿಂದ ಕಲಬುರಗಿಗೆ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ಇದೀಗ ಈ ರೈಲು ಕಲಬುರಗಿಗೆ ಮೊದಲಿಗಿಂತ 45 ನಿಮಿಷ ಬೇಗ ಅಂದರೆ ರಾತ್ರಿ 11:30 ಗಂಟೆಗೆ ಬದಲಾಗಿ ರಾತ್ರಿ 10:45 ಕ್ಕೆ ತಲುಪಲಿದೆ. ಒಟ್ಟಾರೆ ಪ್ರಯಾಣದ ಸಮಯ ಇದೀಗ 8 ಗಂಟೆಯಲ್ಲಿ ಪೂರ್ಣಗೊಳ್ಳಲಿದೆ.

ಪ್ರಯಾಣಿಕರ ಕೋರಿಗೆ ಮೇರೆಗೆ ವಂದೇ ಭಾರತ್ ರೈಲು ಇನ್ಮುಂದೆ ಪುಟ್ಟಪರ್ತಿ ಸತ್ಯಸಾಯಿ ಪ್ರಶಾಂತಿ ನಿಲಯಂನಲ್ಲಿ ನಿಲುಗಡೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT