ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ 
ರಾಜ್ಯ

ಬೆಳಗಾವಿ: ಕಿಯೋಸ್ಕ್‌‌ನಿಂದ ಎಟಿಎಂ ಯಂತ್ರ ಕಳ್ಳತನ; ಒಡೆಯಲು ಆಗದೆ ಬಿಸಾಡಿ ಹೋದ ಖದೀಮರು! Video

ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಇಂಡಿಯಾ ಬ್ಯಾಂಕ್‌ ಎಟಿಎಂ ಯಂತ್ರವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಕಿಯೋಸ್ಕ್‌ನಲ್ಲಿ ಸೋಮವಾರ ರಾತ್ರಿ ಕಳ್ಳತನ ನಡೆದಿದ್ದು, ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ ಎಂದು ಅವರು ಹೇಳಿದರು.

ದುಷ್ಕರ್ಮಿಗಳು ಎಟಿಎಂ ಯಂತ್ರವನ್ನು ಕಿಯೋಸ್ಕ್‌ನಿಂದ ಹೊರತೆಗೆದುಕೊಂಡು ಬಂದು, ಅದನ್ನು ತಳ್ಳುವ ಗಾಡಿಯಲ್ಲಿಟ್ಟುಕೊಂಡು ಸುಮಾರು 200 ಮೀಟರ್ ದೂರ ತಳ್ಳಿಕೊಂಡು ಹೋಗಿದ್ದಾರೆ. ಬಳಿಕ ತಮ್ಮ ವಾಹನದಲ್ಲಿ ಯಂತ್ರವನ್ನು ಇರಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಗಳಲ್ಲಿ ಒಂದರಲ್ಲಿ, ಇಬ್ಬರು ವ್ಯಕ್ತಿಗಳು ಖಾಲಿ ಗಾಡಿಯನ್ನು ಕಿಯೋಸ್ಕ್ ಕಡೆಗೆ ತಳ್ಳಿಕೊಂಡು ಬರುತ್ತಿರುವುದು ಕಂಡುಬಂದಿದೆ.

ಪ್ರಾಥಮಿಕ ತನಿಖೆಗಳ ಆಧಾರದ ಮೇಲೆ, 1 ಲಕ್ಷ ರೂ.ಗೂ ಹೆಚ್ಚು ಹಣ ಹೊಂದಿದ್ದ ಯಂತ್ರವನ್ನು ಶಂಕಿತರು ತೆರೆಯಲು ಯತ್ನಿಸಿದ್ದಾರೆ. ಆದರೆ, ವಿಫಲವಾದಾಗ ಕೆಲವು ಮೀಟರ್ ದೂರದಲ್ಲಿ ಅದನ್ನು ಬಿಟ್ಟು ಹೋಗಿದ್ದಾರೆ. ನಂತರ ಅದನ್ನು ವಶಪಡಿಸಿಕೊಳ್ಳಲಾಗಿದ್ದು, ನಗದು ಹಾಗೆಯೇ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳ್ಳತನ ನಡೆದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಸುಮಾರು 15 ದಿನಗಳ ಹಿಂದೆ ಹೊಸ ಎಟಿಎಂ ಅನ್ನು ತೆರೆಯಲಾಗಿದ್ದರಿಂದ, ಈ ಕಿಯೋಸ್ಕ್ ಅನ್ನು ಮುಚ್ಚಲಾಗಿತ್ತು ಮತ್ತು ಎಲ್ಲ ಸೆನ್ಸಾರ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು ಎಂದು ಅಧಿಕಾರಿ ಹೇಳಿದರು.

ಹಳೆಯ ಕಿಯೋಸ್ಕ್‌ಗೆ ಕಾವಲುಗಾರ ಇರಲಿಲ್ಲ, ಇದು ಕಳ್ಳತನ ಮಾಡಲು ದುಷ್ಕರ್ಮಿಗಳಿಗೆ ಸುಲಭವಾಯಿತು.

ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು