ಅನಧಿಕೃತ ಫ್ಲೋರ್ ತೆರವು 
ರಾಜ್ಯ

ಬೆಂಗಳೂರಿನಲ್ಲಿ ಅನಧಿಕೃತ ಫ್ಲೋರ್, ಅಕ್ರಮ ಕಟ್ಟಡ ತೆರವಿಗೆ 11 ಆಸ್ತಿಗಳನ್ನು ಪಟ್ಟಿ ಮಾಡಿದ GBA!

ಜಿಬಿಎ ಅನಧಿಕೃತ ಫ್ಲೋರ್, ಅಕ್ರಮ ಕಟ್ಟಡ ತೆರವಿಗಾಗಿ 11 ಕಟ್ಟಡಗಳನ್ನು ಪಟ್ಟಿ ಮಾಡಿದೆ. ಮಹದೇವಪುರ ವಿಧಾನಸಭಾ ವಿಭಾಗದಲ್ಲಿ ಐದು ಕಟ್ಟಡಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ವೈಟ್‌ಫೀಲ್ಡ್ ವಾರ್ಡ್‌ನಲ್ಲಿರುವ ಒಂದು ಕಟ್ಟಡದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮೇಲಿನ ಮಹಡಿಯನ್ನು ಕೆಡವಲಾಗಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಡಿಯಲ್ಲಿ ಬರುವ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ, ಅನುಮೋದಿತ ಯೋಜನೆಯನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ಮತ್ತು ಅನಧಿಕೃತವಾಗಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಿದ ಆಸ್ತಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದೆ.

ಜಿಬಿಎ ಅನಧಿಕೃತ ಫ್ಲೋರ್, ಅಕ್ರಮ ಕಟ್ಟಡ ತೆರವಿಗಾಗಿ 11 ಕಟ್ಟಡಗಳನ್ನು ಪಟ್ಟಿ ಮಾಡಿದೆ. ಮಹದೇವಪುರ ವಿಧಾನಸಭಾ ವಿಭಾಗದಲ್ಲಿ ಐದು ಕಟ್ಟಡಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ವೈಟ್‌ಫೀಲ್ಡ್ ವಾರ್ಡ್‌ನಲ್ಲಿರುವ ಒಂದು ಕಟ್ಟಡದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮೇಲಿನ ಮಹಡಿಯನ್ನು ಕೆಡವಲಾಗಿದೆ.

ಅನುಮೋದಿತ ಕಟ್ಟಡ ಯೋಜನೆಗಳನ್ನು ಉಲ್ಲಂಘಿಸಿದ ಅಥವಾ ಅನಧಿಕೃತ ಮಹಡಿಗಳನ್ನು ಸೇರಿಸಿದ ನಿರ್ಮಾಣಗಳ ಕುರಿತು ಜಿಬಿಎ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗೀಕರಿಸಿದ ನಿಯಮ 313, 248 (1), (2) ಮತ್ತು 356 ರ ಆಧಾರದ ಮೇಲೆ, ಮಾಹಿತಿ ಕೋರಿ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಉಲ್ಲಂಘಿಸಿದವರು ತಾವೇ ಅಕ್ರಮ ನಿರ್ಮಾಣವನ್ನು ತೆರವುಗೊಳಿಸುವಂತೆ ಸೂಚಿಸಿದೆ. ನೀವು ತೆರವುಗೊಳಿಸದಿದ್ದರೆ ಜಿಬಿಎ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಸಲಾಗಿದೆ.

ಎರಡು ಕಟ್ಟಡಗಳ ವಿರುದ್ಧ ಕ್ರಮ ಆರಂಭವಾಗಿದೆ ಮತ್ತು ಶೀಘ್ರದಲ್ಲೇ ಉಳಿದ ಕಟ್ಟಡಗಳು ಸಹ ಇದೇ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಪೂರ್ವ ಮಹಾನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ತಿಳಿಸಿದ್ದಾರೆ.

ವೈಟ್‌ಫೀಲ್ಡ್, ಹಗದೂರು ಮತ್ತು ಪಟ್ಟಂದೂರು ವಾರ್ಡ್‌ಗಳಲ್ಲಿ ಅಂತಹ ಆಸ್ತಿಗಳನ್ನು ಗುರುತಿಸಲಾಗಿದೆ ಮತ್ತು ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ.

ಶೀಘ್ರದಲ್ಲೇ, ಐದೂ ಮಹಾನಗರ ಪಾಲಿಕೆಗಳಲ್ಲಿ ನಿಯಮ ಉಲ್ಲಂಘನೆಯ ವಿರುದ್ಧ ಕ್ರಮ ಕೈಗೊಳ್ಳಲು ಜಿಬಿಎ ಪ್ರತ್ಯೇಕ ತಂಡವನ್ನು ರಚಿಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT