ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

ನವೆಂಬರ್ 23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ಬೆಳಗಾವಿ: ಏಳನೇ ತರಗತಿಯ ವಿದ್ಯಾರ್ಥಿನಿಯನ್ನು ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.

ನವೆಂಬರ್ 23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕೃತ್ಯ ಬೆಳಕಿಗೆ ಬರುವುದು ತಡವಾಗಿದೆ.

ಏತನ್ಮಧ್ಯೆ ವಿಚಾರ ತಿಳಿದ ಪೋಷಕರು ಡಿಸೆಂಬರ್ 1ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT